ಒಳ ಮೀಸಲಾತಿಗೆ ಸಂಬಂಧಿಸಿದ ‘ನ್ಯಾಯಮೂರ್ತಿ ನಾಗಮೋಹನದಾಸ್ ವರದಿ’ ಅಪಾರ ಶ್ರಮ ಹಾಗೂ ಕಾಳಜಿಯಿಂದ ಸಿದ್ಧಗೊಂಡಿದೆ. ಆದರೆ, ದೇಶದ ಕೆಲವು ರಾಜ್ಯಗಳಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ಎದುರಿಸುತ್ತಿರುವ ಕಾನೂನು ತೊಡಕುಗಳನ್ನು ನಿವಾರಿಸಿಕೊಳ್ಳುವ ನಿಟ್ಟಿನಲ್ಲಿ ಸಮಿತಿ ಯೋಚಿಸಿದಂತಿಲ್ಲ. ತೆಲಂಗಾಣ ಮಾದರಿಯನ್ನು ಅನುಸರಿಸಿದ್ದರೂ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದಾಗಿತ್ತು.