<p>ಸೆಪ್ಟೆಂಬರ್ 7.. ಭಾನುವಾರ ರಾತ್ರಿ 9.57ರಿಂದ ಚಂದ್ರಗ್ರಹಣ ಪ್ರಕ್ರಿಯೆ ಆರಂಭವಾಗಲಿದೆ. 11.01ರಿಂದ 12.23ರ ಅವಧಿಯಲ್ಲಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದ್ದು, ಸೋಮವಾರ ಮುಂಜಾನೆ 2.25ಕ್ಕೆ ಅಂತ್ಯಗೊಳ್ಳುತ್ತದೆ. ಈ ವಿದ್ಯಮಾನದಲ್ಲಿ ಬಿಳಿ ಬಣ್ಣದಲ್ಲಿರುವ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸಲಿದ್ದಾನೆ. </p><p>ಈ ಗ್ರಹಣವು ಭಾರತದಾದ್ಯಂತವೂ (ದೇಶದ ಬಹುತೇಕ ಭಾಗಗಳಲ್ಲಿ) ಸ್ಪಷ್ಟವಾಗಿ ದೃಶ್ಯಮಾನವಾಗಲಿದ್ದು, ಈ ಸಂಬಂಧ ದೇಶಾದ್ಯಂತ ಹಲವೆಡೆ ದೇವಾಲಯಗಳನ್ನು ಮುಚ್ಚಲಾಗಿರುತ್ತದೆ. ಭಾನುವಾರ ಭಾದ್ರಪದ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಖಗ್ರಾಸ ರಾಹುಗಾಸ್ತ್ರ ಚಂದ್ರಗ್ರಹಣ ಇರುವುದರಿಂದ ಈ ಕೆಳಗೆ ತಿಳಿಸಲಾದ ತಪ್ಪುಗಳನ್ನು ಮಾಡಬೇಡಿ.</p>.<ul><li><p>ಚಂದ್ರಗ್ರಹಣದ ಸಮಯದಲ್ಲಿ ಕೋಪಗೊಳ್ಳಬಾರದು. ಈ ದಿನ ಕೋಪಗೊಳ್ಳುವುದರಿಂದ ಮುಂದಿನ ಹದಿನೈದು ದಿನಗಳ ಕಾಲ ನಿಮಗೆ ಅಪಾಯವು ಎದುರಾಗುತ್ತದೆ.</p></li><li><p>ಚಂದ್ರಗ್ರಹಣದ ಸಮಯದಲ್ಲಿ ಆಹಾರವನ್ನು ಸೇವಿಸಬೇಡಿ, ಇದಲ್ಲದೆ ಪೂಜೆ ಮಾಡುವುದನ್ನು ಸಹ ನಿಷೇಧಿಸಲಾಗಿದೆ.</p></li><li><p>ಚಂದ್ರಗ್ರಹಣದ ಸಮಯದಲ್ಲಿ ಯಾವುದೇ ನಿರ್ಜನ ಸ್ಥಳ ಅಥವಾ ಸ್ಮಶಾನಕ್ಕೆ ಹೋಗಬಾರದು. ಈ ಸಮಯದಲ್ಲಿ ನಕರಾತ್ಮಕ ಶಕ್ತಿಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಾಬಲ್ಯ ಸಾಧಿಸುತ್ತದೆ.</p></li><li><p>ಚಂದ್ರಗ್ರಹಣದ ಸಮಯದಲ್ಲಿ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬಾರದು. ಏಕೆಂದರೆ ಗ್ರಹಣದ ಸಮಯದಲ್ಲಿ ನಕರಾತ್ಮಕ ಶಕ್ತಿಯು ಮೇಲುಗೈ ಸಾಧಿಸುತ್ತದೆ.</p></li><li><p>ಗ್ರಹಣದ ಸಮಯದಲ್ಲಿ ಗಂಡ ಹಾಗೂ ಹೆಂಡತಿ ದೈಹಿಕವಾಗಿ ಸೇರಬಾರದು. ಹೀಗೆ ಮಾಡುವುದರಿಂದ ಮನೆಯ ಶಾಂತಿ ಮತ್ತು ಸಂತೋಷ ಹಾಳಾಗಬಹುದು. </p></li></ul>.Lunar Eclipse | ಚಂದ್ರಗ್ರಹಣ ಫಲಾಫಲ: ನಿಮ್ಮ ರಾಶಿಗೆ ಶುಭವೇ ಅಶುಭವೇ?.<ul><li><p>ಚಂದ್ರಗ್ರಹಣದ ಸಮಯದಲ್ಲಿ ದೇವರ ಮಂತ್ರಗಳನ್ನು ಪಠಿಸುವುದು ತುಂಬಾನೇ ಒಳ್ಳೆಯದು. ಇದು 10 ಪಟ್ಟು ಹೆಚ್ಚು ಶುಭ ಫಲಗಳನ್ನು ನೀಡುತ್ತದೆ ಎನ್ನುವ ಧಾರ್ಮಿಕ ನಂಬಿಕೆ ಇದೆ.</p></li><li><p>ಚಂದ್ರ ಗ್ರಹಣದ ನಂತರ ಶುದ್ಧ ನೀರಿನಿಂದ ಸ್ನಾನ ಮಾಡಿ ಬಡವರಿಗೆ ನಿಮ್ಮ ಕೈಲಾದಷ್ಟು ದಾನ ಮಾಡಬೇಕು.</p></li><li><p>ಚಂದ್ರಗ್ರಹಣದ ನಂತರ ಇಡೀ ಮನೆಯನ್ನು ಶುದ್ಧೀಕರಿಸಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿರುವ ಎಲ್ಲಾ ನಕರಾತ್ಮಕ ಶಕ್ತಿಗಳು ದೂರವಾಗುತ್ತವೆ.</p></li><li><p>ಗ್ರಹಣದ ಸಮಯದಲ್ಲಿ ಹಸುಗಳಿಗೆ ಹುಲ್ಲು, ಪಕ್ಷಿಗಳಿಗೆ ಆಹಾರ ಮತ್ತು ನಿರ್ಗತಿಕರಿಗೆ ಬಟ್ಟೆಗಳನ್ನು ದಾನ ಮಾಡುವುದರಿಂದ ಹೆಚ್ಚಿನ ಪುಣ್ಯ ನಿಮಗೆ ಸಿಗುತ್ತದೆ ಎನ್ನುವ ನಂಬಿಕೆ ಇದೆ.</p></li><li><p>ಚಂದ್ರಗ್ರಹಣ ಮುಗಿದ ಮೇಲೆ ಕೆಲವೊಂದು ವಸ್ತುಗಳನ್ನು ದಾನ ಮಾಡುವುದರಿಂದ ಗ್ರಹಣದ ಪರಿಣಾಮ ದೂರವಾಗುವುದರ ಜೊತೆಗೆ ಜೀವನದಲ್ಲಿ ಸಂತೋಷ ಸಮೃದ್ಧಿ, ಸುಖ ಶಾಂತಿ ನೆಮ್ಮದಿ ದೊರೆಯಲಿದೆ.</p></li></ul>.ಚಂದ್ರಗ್ರಹಣ 2025: ಅಶುಭ ಫಲವಿದ್ದರೆ ಸುಲಭ ಪರಿಹಾರ ಕ್ರಮಗಳು ಇಲ್ಲಿವೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೆಪ್ಟೆಂಬರ್ 7.. ಭಾನುವಾರ ರಾತ್ರಿ 9.57ರಿಂದ ಚಂದ್ರಗ್ರಹಣ ಪ್ರಕ್ರಿಯೆ ಆರಂಭವಾಗಲಿದೆ. 11.01ರಿಂದ 12.23ರ ಅವಧಿಯಲ್ಲಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದ್ದು, ಸೋಮವಾರ ಮುಂಜಾನೆ 2.25ಕ್ಕೆ ಅಂತ್ಯಗೊಳ್ಳುತ್ತದೆ. ಈ ವಿದ್ಯಮಾನದಲ್ಲಿ ಬಿಳಿ ಬಣ್ಣದಲ್ಲಿರುವ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸಲಿದ್ದಾನೆ. </p><p>ಈ ಗ್ರಹಣವು ಭಾರತದಾದ್ಯಂತವೂ (ದೇಶದ ಬಹುತೇಕ ಭಾಗಗಳಲ್ಲಿ) ಸ್ಪಷ್ಟವಾಗಿ ದೃಶ್ಯಮಾನವಾಗಲಿದ್ದು, ಈ ಸಂಬಂಧ ದೇಶಾದ್ಯಂತ ಹಲವೆಡೆ ದೇವಾಲಯಗಳನ್ನು ಮುಚ್ಚಲಾಗಿರುತ್ತದೆ. ಭಾನುವಾರ ಭಾದ್ರಪದ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಖಗ್ರಾಸ ರಾಹುಗಾಸ್ತ್ರ ಚಂದ್ರಗ್ರಹಣ ಇರುವುದರಿಂದ ಈ ಕೆಳಗೆ ತಿಳಿಸಲಾದ ತಪ್ಪುಗಳನ್ನು ಮಾಡಬೇಡಿ.</p>.<ul><li><p>ಚಂದ್ರಗ್ರಹಣದ ಸಮಯದಲ್ಲಿ ಕೋಪಗೊಳ್ಳಬಾರದು. ಈ ದಿನ ಕೋಪಗೊಳ್ಳುವುದರಿಂದ ಮುಂದಿನ ಹದಿನೈದು ದಿನಗಳ ಕಾಲ ನಿಮಗೆ ಅಪಾಯವು ಎದುರಾಗುತ್ತದೆ.</p></li><li><p>ಚಂದ್ರಗ್ರಹಣದ ಸಮಯದಲ್ಲಿ ಆಹಾರವನ್ನು ಸೇವಿಸಬೇಡಿ, ಇದಲ್ಲದೆ ಪೂಜೆ ಮಾಡುವುದನ್ನು ಸಹ ನಿಷೇಧಿಸಲಾಗಿದೆ.</p></li><li><p>ಚಂದ್ರಗ್ರಹಣದ ಸಮಯದಲ್ಲಿ ಯಾವುದೇ ನಿರ್ಜನ ಸ್ಥಳ ಅಥವಾ ಸ್ಮಶಾನಕ್ಕೆ ಹೋಗಬಾರದು. ಈ ಸಮಯದಲ್ಲಿ ನಕರಾತ್ಮಕ ಶಕ್ತಿಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಾಬಲ್ಯ ಸಾಧಿಸುತ್ತದೆ.</p></li><li><p>ಚಂದ್ರಗ್ರಹಣದ ಸಮಯದಲ್ಲಿ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಬಾರದು. ಏಕೆಂದರೆ ಗ್ರಹಣದ ಸಮಯದಲ್ಲಿ ನಕರಾತ್ಮಕ ಶಕ್ತಿಯು ಮೇಲುಗೈ ಸಾಧಿಸುತ್ತದೆ.</p></li><li><p>ಗ್ರಹಣದ ಸಮಯದಲ್ಲಿ ಗಂಡ ಹಾಗೂ ಹೆಂಡತಿ ದೈಹಿಕವಾಗಿ ಸೇರಬಾರದು. ಹೀಗೆ ಮಾಡುವುದರಿಂದ ಮನೆಯ ಶಾಂತಿ ಮತ್ತು ಸಂತೋಷ ಹಾಳಾಗಬಹುದು. </p></li></ul>.Lunar Eclipse | ಚಂದ್ರಗ್ರಹಣ ಫಲಾಫಲ: ನಿಮ್ಮ ರಾಶಿಗೆ ಶುಭವೇ ಅಶುಭವೇ?.<ul><li><p>ಚಂದ್ರಗ್ರಹಣದ ಸಮಯದಲ್ಲಿ ದೇವರ ಮಂತ್ರಗಳನ್ನು ಪಠಿಸುವುದು ತುಂಬಾನೇ ಒಳ್ಳೆಯದು. ಇದು 10 ಪಟ್ಟು ಹೆಚ್ಚು ಶುಭ ಫಲಗಳನ್ನು ನೀಡುತ್ತದೆ ಎನ್ನುವ ಧಾರ್ಮಿಕ ನಂಬಿಕೆ ಇದೆ.</p></li><li><p>ಚಂದ್ರ ಗ್ರಹಣದ ನಂತರ ಶುದ್ಧ ನೀರಿನಿಂದ ಸ್ನಾನ ಮಾಡಿ ಬಡವರಿಗೆ ನಿಮ್ಮ ಕೈಲಾದಷ್ಟು ದಾನ ಮಾಡಬೇಕು.</p></li><li><p>ಚಂದ್ರಗ್ರಹಣದ ನಂತರ ಇಡೀ ಮನೆಯನ್ನು ಶುದ್ಧೀಕರಿಸಬೇಕು. ಹೀಗೆ ಮಾಡುವುದರಿಂದ ಮನೆಯಲ್ಲಿರುವ ಎಲ್ಲಾ ನಕರಾತ್ಮಕ ಶಕ್ತಿಗಳು ದೂರವಾಗುತ್ತವೆ.</p></li><li><p>ಗ್ರಹಣದ ಸಮಯದಲ್ಲಿ ಹಸುಗಳಿಗೆ ಹುಲ್ಲು, ಪಕ್ಷಿಗಳಿಗೆ ಆಹಾರ ಮತ್ತು ನಿರ್ಗತಿಕರಿಗೆ ಬಟ್ಟೆಗಳನ್ನು ದಾನ ಮಾಡುವುದರಿಂದ ಹೆಚ್ಚಿನ ಪುಣ್ಯ ನಿಮಗೆ ಸಿಗುತ್ತದೆ ಎನ್ನುವ ನಂಬಿಕೆ ಇದೆ.</p></li><li><p>ಚಂದ್ರಗ್ರಹಣ ಮುಗಿದ ಮೇಲೆ ಕೆಲವೊಂದು ವಸ್ತುಗಳನ್ನು ದಾನ ಮಾಡುವುದರಿಂದ ಗ್ರಹಣದ ಪರಿಣಾಮ ದೂರವಾಗುವುದರ ಜೊತೆಗೆ ಜೀವನದಲ್ಲಿ ಸಂತೋಷ ಸಮೃದ್ಧಿ, ಸುಖ ಶಾಂತಿ ನೆಮ್ಮದಿ ದೊರೆಯಲಿದೆ.</p></li></ul>.ಚಂದ್ರಗ್ರಹಣ 2025: ಅಶುಭ ಫಲವಿದ್ದರೆ ಸುಲಭ ಪರಿಹಾರ ಕ್ರಮಗಳು ಇಲ್ಲಿವೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>