ರಾಹು-ಕೇತು, ಶನಿಗಳು ಒಟ್ಟಾಗಿ ಮತದಾರರ ಏಳನೇ ಮನೆ ಪ್ರವೇಶಿಸುವುದರಿಂದ ಕಾಯಿಲೆ, ಕಾಸಿಗೆ ತತ್ವಾರವು. ದಿವಸ ಧಾನ್ಯ, ತರಕಾರಿ, ಹಣ್ಣು ಬೆಲೆ ತೇಜಿಯಾಗಲಿದೆ. ಬ್ಯಾಂಕ್ ಬಡ್ಡಿ ದರ ಇಳಿಕೆಯಿಂದ ವಿತ್ತಭ್ರಮೆ. ಎಣ್ಣೆ ಬೆಲೆ ಹೆಚ್ಚಿ ಮದ್ಯಕ್ಷಾಮ. ಚಿನ್ನದ ಬೆಲೆ ಹೆಚ್ಚಳದಿಂದ ಚೋರಭಯ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಳಿತದಿಂದ ಜನ ಸುಸ್ತು. ಉಳ್ಳವರಿಗೆ ಲ್ಯಾಂಡು ರೋಗ ಹೆಚ್ಚಳ. ಏಕಾದಶ ಗ್ರಹಗಳು ಒಂದಾದಲ್ಲಿ ಆರ್ಸಿಬಿಗೆ ಐಪಿಎಲ್ ಕಪ್ಪು ಗ್ಯಾರಂಟಿ.