‘ದುಡಿಯಲಾರದವರು ಜೇಬು ತೂತು ಅಂದರಂತೆ, ದುಡ್ಡಿನ ಸಮಸ್ಯೆಗೆ ದೇವರು ಕಾರಣ ಅಂದುಬಿಟ್ಟರೆ ಸಂಸಾರ ಸಾಗುತ್ತಾ ಗುರೂಜೀ?’
‘ಭಾಗ್ಯ ಕೊಡುವ ಭಗವಂತ ಮುನಿಸಿ ಕೊಂಡಿದ್ದಾನೆ, ಆರ್ಥಿಕ ಸಂಕಷ್ಟಕ್ಕೆ ದೇವರು ಕಾರಣ ಅಂತ ಹಣಕಾಸಿನ ಅಮ್ಮ ನಿರ್ಮಲಮ್ಮ ಹೇಳಿಲ್ವಾ, ಅವರಿಗೇ ಕಷ್ಟ ಬಂದಿರುವಾಗ ಈ ಸಾಮಾನ್ಯ ಗಂಡನಿಗೆ ಬರದಿರುತ್ತದೆಯೇ...’
‘ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿರುವ ದೇವರು ಯಾರು ಹೇಳಿ ಗುರೂಜಿ, ತಕ್ಕ ಪೂಜೆ ಮಾಡ್ತೀನಿ’.
‘ದೇವರು ಯಾವ ರೂಪದಲ್ಲಿರುವನೋ ಹೇಳಲಾಗದು. ನಿರ್ಮಲಮ್ಮನ ಪ್ರಕಾರ ಈಗ ದೇವರು ಕೊರೊನಾ ಅವತಾರದಲ್ಲಿ ಕಷ್ಟ ಕೊಡುತ್ತಿದ್ದಾನಂತೆ’.
‘ಕೊರೊನಾ ದೇವರ ಕೃಪೆ ಪಡೆಯಲು ಪೂಜೆ, ಹೋಮ ಮಾಡಬೇಕೆ, ಮುಡಿ ಕೊಡಬೇಕೆ ಹೇಳಿ’.
‘ಏನೂ ಬೇಡಮ್ಮ, ದೇವರು ಶಾಂತವಾಗುವ ತನಕ ಬಾಯಿಗೆ ಮಾಸ್ಕ್ ಹಾಕಿಕೊಂಡು, ಗಂಡನ ಜೊತೆ ಡಿಸ್ಟೆನ್ಸ್ ಕಾಪಾಡಿಕೊಂಡು ಮೌನ ವ್ರತ ಆಚರಿಸು...’ ಜ್ಯೋತಿಷಿ ಸಲಹೆ ಮಾಡಿದರು.