<p><strong>ನವದೆಹಲಿ:</strong> ಸಿಬಿಎಸ್ಇ 12ನೇ ತರಗತಿಯ ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಬುಧವಾರ ಸಂಜೆ ವಾಟ್ಸ್ಆ್ಯಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಸಿಬಿಎಸ್ಇ ಇದನ್ನು ತಳ್ಳಿ ಹಾಕಿದೆ.</p>.<p>ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ತಮಗೆ ಸಾಕಷ್ಟು ದೂರುಗಳು ಬಂದಿವೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ಹೇಳಿದ್ದಾರೆ.</p>.<p>ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪರೀಕ್ಷಾ ಮಂಡಳಿ ವಿರುದ್ಧ ದೂರು ನೀಡಿ, ತನಿಖೆ ನಡೆಸುವಂತೆ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಿಕ್ಷಣ ಸಚಿವರೂ ಆಗಿರುವ ಸಿಸೋಡಿಯಾ ಹೇಳಿದ್ದಾರೆ. ‘ಪರೀಕ್ಷಾ ಮಂಡಳಿಯ ನಿರ್ಲಕ್ಷ್ಯದಿಂದ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕಠಿಣ ಕ್ರಮ ಅಗತ್ಯ’ ಎಂದಿದ್ದಾರೆ.</p>.<p><strong>ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: </strong>ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿ ಹರಡಿಸುತ್ತಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ಸಿಬಿಎಸ್ಇ ತಿಳಿಸಿದೆ.</p>.<p>‘ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಮುದ್ರೆ ಇರುವ ಪ್ರಶ್ನೆಪತ್ರಿಕೆಗಳು ರವಾನೆಯಾಗಿವೆ. ಸ್ಥಳೀಯ ಮಟ್ಟದಲ್ಲಿ ಕೆಲ ಕಿಡಿಗೇಡಿಗಳು ಪರೀಕ್ಷೆಯ ಪಾವಿತ್ರ್ಯತೆ ಹಾಳು ಮಾಡುವ ಉದ್ದೇಶದಿಂದ ವಾಟ್ಸ್ಆ್ಯಪ್ನಲ್ಲಿ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ’ ಎಂದು ಪರೀಕ್ಷಾ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಿಬಿಎಸ್ಇ 12ನೇ ತರಗತಿಯ ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಬುಧವಾರ ಸಂಜೆ ವಾಟ್ಸ್ಆ್ಯಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಸಿಬಿಎಸ್ಇ ಇದನ್ನು ತಳ್ಳಿ ಹಾಕಿದೆ.</p>.<p>ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ತಮಗೆ ಸಾಕಷ್ಟು ದೂರುಗಳು ಬಂದಿವೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ಹೇಳಿದ್ದಾರೆ.</p>.<p>ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪರೀಕ್ಷಾ ಮಂಡಳಿ ವಿರುದ್ಧ ದೂರು ನೀಡಿ, ತನಿಖೆ ನಡೆಸುವಂತೆ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಿಕ್ಷಣ ಸಚಿವರೂ ಆಗಿರುವ ಸಿಸೋಡಿಯಾ ಹೇಳಿದ್ದಾರೆ. ‘ಪರೀಕ್ಷಾ ಮಂಡಳಿಯ ನಿರ್ಲಕ್ಷ್ಯದಿಂದ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕಠಿಣ ಕ್ರಮ ಅಗತ್ಯ’ ಎಂದಿದ್ದಾರೆ.</p>.<p><strong>ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: </strong>ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿ ಹರಡಿಸುತ್ತಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ಸಿಬಿಎಸ್ಇ ತಿಳಿಸಿದೆ.</p>.<p>‘ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಮುದ್ರೆ ಇರುವ ಪ್ರಶ್ನೆಪತ್ರಿಕೆಗಳು ರವಾನೆಯಾಗಿವೆ. ಸ್ಥಳೀಯ ಮಟ್ಟದಲ್ಲಿ ಕೆಲ ಕಿಡಿಗೇಡಿಗಳು ಪರೀಕ್ಷೆಯ ಪಾವಿತ್ರ್ಯತೆ ಹಾಳು ಮಾಡುವ ಉದ್ದೇಶದಿಂದ ವಾಟ್ಸ್ಆ್ಯಪ್ನಲ್ಲಿ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ’ ಎಂದು ಪರೀಕ್ಷಾ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>