ಗ್ಯಾರಂಟಿ ಯೋಜನೆಗಳ ಪರಿಣಾಮ ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ನೀರಾವರಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಅತ್ಯಂತ ಕಡಿಮೆ ದುಡ್ಡು ಖರ್ಚು ಮಾಡಲಾಗುತ್ತಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತಗಳಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿರುವುದು ತುಂಬಲಾರದ ನಷ್ಟ. ಇದನ್ನು ಸರಿಪಡಿಸಲು ಮುಂದೆ ಬರುವಂತಹ ಸರ್ಕಾರ ಹರಸಾಹಸ ಪಡಬೇಕಾಗುತ್ತದೆ. ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯ ಹೆಚ್ಚು ಸಾಲ ಮಾಡಿದ್ದರು. ಈಗಲೂ ಅತಿ ಹೆಚ್ಚು ಸಾಲ ಮಾಡಿದ್ದಾರೆ. ಅವರು ಈ ಅವಧಿಯಲ್ಲಿ ₹6 ಲಕ್ಷ ಕೋಟಿಗಿಂತ ಹೆಚ್ಚು ಹೊರೆಯನ್ನು ರಾಜ್ಯದ ಜನರ ಮೇಲೆ ಹೇರಲಿದ್ದಾರೆ