ಚರ್ಚೆ | ಕೇಂದ್ರ ಬಜೆಟ್; ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯ: ಸಚಿವ ಕೃಷ್ಣಬೈರೇಗೌಡ
ಕೇಂದ್ರದ 2026ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆಯೇ ಎನ್ನುವ ಬಗ್ಗೆ ಸಚಿವ ಕೃಷ್ಣಬೈರೇಗೌಡ ಅವರ ಲೇಖನ
ಕೃಷ್ಣಬೈರೇಗೌಡ
Published : 14 ಫೆಬ್ರುವರಿ 2026, 0:30 IST
Last Updated : 14 ಫೆಬ್ರುವರಿ 2026, 0:30 IST
ADVERTISEMENT
ಫಾಲೋ ಮಾಡಿ
Comments
ದೇಶದ ಸಂವಿಧಾನವು ಜನರ ಯೋಗಕ್ಷೇಮ ಹಾಗೂ ಅಭಿವೃದ್ಧಿ ಕರ್ತವ್ಯದಲ್ಲಿ 2/3 ಭಾಗದ ಹೊಣೆಯನ್ನು ರಾಜ್ಯಗಳಿಗೆ ವಹಿಸಿದೆ. ಆದರೆ, 2/3ರಷ್ಟು ಆದಾಯವನ್ನು ಕೇಂದ್ರ ಸರ್ಕಾರಕ್ಕೆ ನೀಡಿದೆ. ಈ ನಿಯಮ ರಾಜ್ಯಗಳ ಸುಸ್ಥಿರ ಅಭಿವೃದ್ಧಿಗೆ ಮಾರಕ. ಹೆಚ್ಚಿನ ಪ್ರಮಾಣದ ಅಭಿವೃದ್ಧಿ ಕೆಲಸಗಳನ್ನು ರಾಜ್ಯಗಳೇ ಮಾಡಬೇಕು. ಆದರೆ, ಆದಾಯ ಮಾತ್ರ ಕೇಂದ್ರದ ಪಾಲಾದರೆ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ? ಸಾರ್ವಜನಿಕರೂ ಅವರ ಯೋಗಕ್ಷೇಮದ ಬೇಡಿಕೆ ಹಾಗೂ ಅಭಿವೃದ್ಧಿ ಅಗತ್ಯಗಳಿಗೆ ರಾಜ್ಯ ಸರ್ಕಾರಗಳನ್ನೇ ಅವಲಂಬಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರವು ರಾಜ್ಯಗಳ ಆರ್ಥಿಕ ಸ್ವಾಯತ್ತೆಗೆ ಕೊಕ್ಕೆ ಹಾಕಿ ಕೂತಿರುವುದು ಗಣತಂತ್ರ ಒಕ್ಕೂಟ ವ್ಯವಸ್ಥೆಯ ಅಣಕವಲ್ಲದೆ ಮತ್ತೇನು?