ಸಹಕಾರನಗರದ ಕಾವೇರಿ ಬಿ.ಇಡಿ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪಠ್ಯಕ್ರಮ ಸಿದ್ಧವಾಗುವ ಹಂತದಲ್ಲಿದ್ದು, 4 ವರ್ಷಗಳ ಈ ತರಬೇತಿ ಕಾರ್ಯಕ್ರಮಕ್ಕೆ ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಈಗಾಗಲೇ ಪ್ರಾಯೋಗಿಕವಾಗಿ ಕೆಲವು ಕಾಲೇಜುಗಳಲ್ಲಿ ಈ ಕೋರ್ಸ್ ಪರಿಚಯಿಸಲಾಗಿದ್ದು, ಶೀಘ್ರದಲ್ಲೇ ಇತರೆ ಕಾಲೇಜುಗಳಿಗೂ ವಿಸ್ತರಣೆಯಾಗಲಿದ್ದು, ಇದರಿಂದ ಮತ್ತಷ್ಟು ಒಳ್ಳೆಯ ಕೆಲಸಗಳನ್ನು ಶಿಕ್ಷಕರ ತರಬೇತಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿದೆ ಎಂದರು.