ನಗರದ ನಂದನಗದ್ದಾ ಸಮೀಪದ ಅಂಬೇಡ್ಕರ್ ಕಾಲೊನಿಯಲ್ಲಿ ದೀಪಕ್ ಹುಲಸ್ವಾರ್ ಎಂಬುವವರ ಮನೆಯ ಮೇಲೆ ತೆಂಗಿನಮರವೊಂದು ಬಿದ್ದು ಹೆಂಚು, ಅಡ್ಡಪಟ್ಟಿಗಳು ಒಡೆದಿವೆ. ಚಾವಣಿಗೆ ಅಳವಡಿಸಿದ್ದ ಫ್ಯಾನ್, ವಿದ್ಯುತ್ ದೀಪಗಳಿಗೂ ಹಾನಿಯಾಗಿದೆ. ಕಾಲೊನಿಯಲ್ಲಿ ಮಾವಿನ ಮರವೊಂದು ಮುರಿದು ರಸ್ತೆಗೆ ಬಿದ್ದ ಕಾರಣ ಸಂಚಾರಕ್ಕೆ ಅಡಚಣೆಯಾಯಿತು. ಬಳಿಕ ಸ್ಥಳೀಯರು ಮತ್ತು ನಗರಸಭೆ ಕಾರ್ಮಿಕರು ತೆರವುಗೊಳಿಸಿದರು. ಈ ಭಾಗದಲ್ಲಿ ವಿದ್ಯುತ್ ತಂತಿಯೂ ತುಂಡಾಗಿದೆ.