ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜತೆ ಮಾತುಕತೆ ನಡೆಸಿದ ಅವರು, ‘ಮಸ್ತಕಾಭಿಷೇಕದ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಬೇಕಾದ ಪೊಲೀಸ್ ಬಂದೋಬಸ್ತ್ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ. ಭಕ್ತರು, ಪ್ರವಾಸಿಗರ ಸಂಖ್ಯೆ ಆಧರಿಸಿ ಪೊಲೀಸ್ ನಿಯೋಜನೆ ಮಾಡಲಾಗುವುದು. ಯಾತ್ರಾರ್ಥಿಗಳಿಗೆ ಕನ್ನಡ, ಇಂಗ್ಲಿಷ್, ಹಿಂದಿಯಲ್ಲಿ ಮಾಹಿತಿ ರವಾನಿಸಲಾಗುವುದು. ಕಣ್ಗಾವಲಿಗಾಗಿ ಸಿಸಿಟಿವಿ ಕ್ಯಾಮರಾ, ಬೈನಾಕ್ಯುಲರ್ ಅಳವಡಿಸಲಾಗುವುದು’ ಎಂದು ಹೇಳಿದರು.