<div> ಪ್ರತಿಯೊಬ್ಬರಿಗೂ ಗುಣಮಟ್ಟದ ಮತ್ತು ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಉದ್ದೇಶದ ‘ರಾಷ್ಟ್ರೀಯ ಆರೋಗ್ಯ ನೀತಿ– 2017’ರ ಅನುಷ್ಠಾನಕ್ಕೆ ಕಡೆಗೂ ಕೇಂದ್ರ ಸರ್ಕಾರ ಮುಂದಾಗಿದೆ. ಈ ನೀತಿ ಜಾರಿಯ ವಿಳಂಬದ ಬಗ್ಗೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.<br /> <br /> ಕಾಯಿಲೆಗಳು ಬರದಂತೆ ಮುಂಜಾಗ್ರತಾ ಕ್ರಮಗಳಿಗೆ ಈ ನೀತಿಯಲ್ಲಿ ಆದ್ಯತೆ ನೀಡಲಾಗಿದೆ. ಚಿಕಿತ್ಸೆ ಪಡೆಯುವಾಗ ಹಣಕಾಸು ಸಂಕಷ್ಟ ಎದುರಾಗದಂತೆ ನೋಡಿಕೊಳ್ಳುವ ಕಾಳಜಿಯನ್ನೂ ಒಳಗೊಂಡಿರುವುದು ಈ ನೀತಿಯ ಪ್ರಮುಖ ಅಂಶ. ಜೊತೆಗೆ ಸರ್ವರಿಗೂ ಆರೋಗ್ಯ ಸೇವೆ ಒದಗಿಸಲು ಅನೇಕ ಮಹತ್ವಾಕಾಂಕ್ಷೆಯ ಗುರಿಗಳನ್ನು ನಿಗದಿಪಡಿಸಿರುವುದು ಸಕಾಲಿಕ.<div> <br /> ಹೀಗಾಗಿ ದೇಶಿ ಆರೋಗ್ಯ ಕ್ಷೇತ್ರದಲ್ಲಿ ಇದೊಂದು ಹೊಸ ಮೈಲುಗಲ್ಲು. ಆರೋಗ್ಯವಂತ ಸಮಾಜ ನಿರ್ಮಾಣದತ್ತ ಇರಿಸಿದಂತಹ ಸರಿಯಾದ ಹೆಜ್ಜೆ ಎನ್ನಬಹುದು. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ವಿನಿಯೋಗಿಸುವ ಮೊತ್ತದಲ್ಲಿ ಗಮನಾರ್ಹ ಹೆಚ್ಚಳ, ಶಾಲೆ ಮತ್ತು ಕೆಲಸ ಮಾಡುವ ಸ್ಥಳಗಳಲ್ಲಿ ಯೋಗ ಶಿಕ್ಷಣ ಜಾರಿ ಈ ನೀತಿಯಲ್ಲಿ ಸೇರಿವೆ.</div><div> </div><div> ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಶಿಶು ಮರಣ ತಗ್ಗಿಸುವ ವಿಚಾರ ಆದ್ಯತೆ ಪಡೆದುಕೊಂಡಿದೆ. ಇದು ಸದ್ಯದ ತುರ್ತು ಅಗತ್ಯವಾಗಿತ್ತು ಎಂಬುದನ್ನು ಗಮನಿಸಬೇಕು. ಜೊತೆಗೆ ಚಿಕಿತ್ಸೆಯಲ್ಲಿನ ಲೋಪದೋಷಗಳ ವಿರುದ್ಧ ನ್ಯಾಯಮಂಡಳಿಗೆ ದೂರು ನೀಡಲು ಅವಕಾಶ ಕಲ್ಪಿಸಿರುವುದು ರೋಗಿಗಳ ಹಕ್ಕುಗಳ ರಕ್ಷಣೆಯ ಪ್ರಮುಖ ಕ್ರಮವಾಗಿದೆ.</div><div> <br /> ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದೊರೆಯುವ ಸೇವೆಗಳು ಮತ್ತು ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದಲ್ಲದೆ ಮಾನವನ ಜೀವಿತಾವಧಿಯನ್ನು 67.5 ವರ್ಷಗಳಿಂದ 70 ವರ್ಷಗಳಿಗೆ ಹೆಚ್ಚಿಸುವ ಗುರಿಯನ್ನೂ ಈ ನೀತಿ ಹೊಂದಿದೆ. ಹಾಗೆಯೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆ ಮತ್ತು ಔಷಧಿಗಳನ್ನು ನೀಡುವಂತಹ ಕ್ರಮಗಳು ಆರೋಗ್ಯವಂತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಮುಖ್ಯವಾದವು.</div><div> </div><div> ಸಾರ್ವಜನಿಕ ಆರೋಗ್ಯ ವೆಚ್ಚವನ್ನು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ 1.5ರಿಂದ ಶೇ 2.5ಕ್ಕೆ ಹೆಚ್ಚಿಸುವುದು ಈ ಯೋಜನೆಯ ಮಹತ್ವದ ಅಂಶಗಳಲ್ಲಿ ಒಂದು. ವಿದೇಶಿಯರು ನಮ್ಮಲ್ಲಿಗೆ ಬಂದು ಚಿಕಿತ್ಸೆ ಪಡೆಯುವ ‘ಆರೋಗ್ಯ ಪ್ರವಾಸೋದ್ಯಮ’ ಅಗಾಧವಾಗಿ ಬೆಳೆಯುತ್ತಿದ್ದರೂ, ಎಲ್ಲರಿಗೂ ಎಲ್ಲ ಬಗೆಯ ವೈದ್ಯಕೀಯ ಸೌಲಭ್ಯವು ನಮ್ಮಲ್ಲಿ ದೊರೆಯದಿರುವುದು ವಿಪರ್ಯಾಸ.</div><div> <br /> ಸರ್ವರ ಆರೋಗ್ಯ ರಕ್ಷಣೆ ಎಂಬಂತಹ ಸದುದ್ದೇಶದ ಈ ನೀತಿ ಜಾರಿಗಾಗಿ ಖಾಸಗಿ ವಲಯವನ್ನೂ ಜತೆಯಲ್ಲಿಯೇ ಕರೆದುಕೊಂಡು ಹೋಗುವುದು ಸದ್ಯದ ಸ್ಥಿತಿಯಲ್ಲಿ ಅನಿವಾರ್ಯವಾಗಿದೆ. ಇಂತಹ ಸಂದರ್ಭದಲ್ಲಿ ಉತ್ತರದಾಯಿತ್ವ, ಗುಣಮಟ್ಟದ ಆರೈಕೆ ಹಾಗೂ ವೆಚ್ಚದ ಮೇಲಿನ ನಿಯಂತ್ರಣ ಮುಖ್ಯವಾಗುತ್ತದೆ. </div><div> </div><div> ವೈದ್ಯಕೀಯ ಲೋಕದಲ್ಲೂ ಹಲವು ಸಮಸ್ಯೆಗಳಿವೆ. ಹೀಗಾಗಿ ಘೋಷಿತ ಕಾರ್ಯಕ್ರಮಗಳನ್ನೆಲ್ಲ ಜಾರಿಗೊಳಿಸುವುದು ಹೇಳಿದಷ್ಟು ಸುಲಭವಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕಾದುದು ಮುಖ್ಯ.</div><div> </div><div> ಈ ನೀತಿ ಅನುಷ್ಠಾನದ ಜಾರಿಯಲ್ಲಿ ಇರುವ ಅಡೆತಡೆಗಳನ್ನು ನಿವಾರಿಸಿಕೊಳ್ಳುವುದು ಆದ್ಯತೆಯಾಗಬೇಕು. ಮೊದಲಿಗೆ ಆರೋಗ್ಯ ಕ್ಷೇತ್ರದ ವಿಶ್ವಾಸಾರ್ಹತೆ ಹೆಚ್ಚುವುದು ಮುಖ್ಯ. ಎಲ್ಲರಿಗೂ ಸುಲಭ ವೆಚ್ಚದಲ್ಲಿ ಆರೋಗ್ಯ ಸೇವೆಗಳು ದಕ್ಕುವಂತಾಗಬೇಕು. ಇದಕ್ಕಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಅಗತ್ಯ ಮಾನವ ಸಂಪನ್ಮೂಲ ಹೆಚ್ಚಿಸುವುದೂ ಅತ್ಯವಶ್ಯಕ. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> ಪ್ರತಿಯೊಬ್ಬರಿಗೂ ಗುಣಮಟ್ಟದ ಮತ್ತು ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಉದ್ದೇಶದ ‘ರಾಷ್ಟ್ರೀಯ ಆರೋಗ್ಯ ನೀತಿ– 2017’ರ ಅನುಷ್ಠಾನಕ್ಕೆ ಕಡೆಗೂ ಕೇಂದ್ರ ಸರ್ಕಾರ ಮುಂದಾಗಿದೆ. ಈ ನೀತಿ ಜಾರಿಯ ವಿಳಂಬದ ಬಗ್ಗೆ ಸುಪ್ರೀಂ ಕೋರ್ಟ್ ಕಳೆದ ವರ್ಷ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.<br /> <br /> ಕಾಯಿಲೆಗಳು ಬರದಂತೆ ಮುಂಜಾಗ್ರತಾ ಕ್ರಮಗಳಿಗೆ ಈ ನೀತಿಯಲ್ಲಿ ಆದ್ಯತೆ ನೀಡಲಾಗಿದೆ. ಚಿಕಿತ್ಸೆ ಪಡೆಯುವಾಗ ಹಣಕಾಸು ಸಂಕಷ್ಟ ಎದುರಾಗದಂತೆ ನೋಡಿಕೊಳ್ಳುವ ಕಾಳಜಿಯನ್ನೂ ಒಳಗೊಂಡಿರುವುದು ಈ ನೀತಿಯ ಪ್ರಮುಖ ಅಂಶ. ಜೊತೆಗೆ ಸರ್ವರಿಗೂ ಆರೋಗ್ಯ ಸೇವೆ ಒದಗಿಸಲು ಅನೇಕ ಮಹತ್ವಾಕಾಂಕ್ಷೆಯ ಗುರಿಗಳನ್ನು ನಿಗದಿಪಡಿಸಿರುವುದು ಸಕಾಲಿಕ.<div> <br /> ಹೀಗಾಗಿ ದೇಶಿ ಆರೋಗ್ಯ ಕ್ಷೇತ್ರದಲ್ಲಿ ಇದೊಂದು ಹೊಸ ಮೈಲುಗಲ್ಲು. ಆರೋಗ್ಯವಂತ ಸಮಾಜ ನಿರ್ಮಾಣದತ್ತ ಇರಿಸಿದಂತಹ ಸರಿಯಾದ ಹೆಜ್ಜೆ ಎನ್ನಬಹುದು. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ವಿನಿಯೋಗಿಸುವ ಮೊತ್ತದಲ್ಲಿ ಗಮನಾರ್ಹ ಹೆಚ್ಚಳ, ಶಾಲೆ ಮತ್ತು ಕೆಲಸ ಮಾಡುವ ಸ್ಥಳಗಳಲ್ಲಿ ಯೋಗ ಶಿಕ್ಷಣ ಜಾರಿ ಈ ನೀತಿಯಲ್ಲಿ ಸೇರಿವೆ.</div><div> </div><div> ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಶಿಶು ಮರಣ ತಗ್ಗಿಸುವ ವಿಚಾರ ಆದ್ಯತೆ ಪಡೆದುಕೊಂಡಿದೆ. ಇದು ಸದ್ಯದ ತುರ್ತು ಅಗತ್ಯವಾಗಿತ್ತು ಎಂಬುದನ್ನು ಗಮನಿಸಬೇಕು. ಜೊತೆಗೆ ಚಿಕಿತ್ಸೆಯಲ್ಲಿನ ಲೋಪದೋಷಗಳ ವಿರುದ್ಧ ನ್ಯಾಯಮಂಡಳಿಗೆ ದೂರು ನೀಡಲು ಅವಕಾಶ ಕಲ್ಪಿಸಿರುವುದು ರೋಗಿಗಳ ಹಕ್ಕುಗಳ ರಕ್ಷಣೆಯ ಪ್ರಮುಖ ಕ್ರಮವಾಗಿದೆ.</div><div> <br /> ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದೊರೆಯುವ ಸೇವೆಗಳು ಮತ್ತು ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದಲ್ಲದೆ ಮಾನವನ ಜೀವಿತಾವಧಿಯನ್ನು 67.5 ವರ್ಷಗಳಿಂದ 70 ವರ್ಷಗಳಿಗೆ ಹೆಚ್ಚಿಸುವ ಗುರಿಯನ್ನೂ ಈ ನೀತಿ ಹೊಂದಿದೆ. ಹಾಗೆಯೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆ ಮತ್ತು ಔಷಧಿಗಳನ್ನು ನೀಡುವಂತಹ ಕ್ರಮಗಳು ಆರೋಗ್ಯವಂತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಮುಖ್ಯವಾದವು.</div><div> </div><div> ಸಾರ್ವಜನಿಕ ಆರೋಗ್ಯ ವೆಚ್ಚವನ್ನು ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಶೇ 1.5ರಿಂದ ಶೇ 2.5ಕ್ಕೆ ಹೆಚ್ಚಿಸುವುದು ಈ ಯೋಜನೆಯ ಮಹತ್ವದ ಅಂಶಗಳಲ್ಲಿ ಒಂದು. ವಿದೇಶಿಯರು ನಮ್ಮಲ್ಲಿಗೆ ಬಂದು ಚಿಕಿತ್ಸೆ ಪಡೆಯುವ ‘ಆರೋಗ್ಯ ಪ್ರವಾಸೋದ್ಯಮ’ ಅಗಾಧವಾಗಿ ಬೆಳೆಯುತ್ತಿದ್ದರೂ, ಎಲ್ಲರಿಗೂ ಎಲ್ಲ ಬಗೆಯ ವೈದ್ಯಕೀಯ ಸೌಲಭ್ಯವು ನಮ್ಮಲ್ಲಿ ದೊರೆಯದಿರುವುದು ವಿಪರ್ಯಾಸ.</div><div> <br /> ಸರ್ವರ ಆರೋಗ್ಯ ರಕ್ಷಣೆ ಎಂಬಂತಹ ಸದುದ್ದೇಶದ ಈ ನೀತಿ ಜಾರಿಗಾಗಿ ಖಾಸಗಿ ವಲಯವನ್ನೂ ಜತೆಯಲ್ಲಿಯೇ ಕರೆದುಕೊಂಡು ಹೋಗುವುದು ಸದ್ಯದ ಸ್ಥಿತಿಯಲ್ಲಿ ಅನಿವಾರ್ಯವಾಗಿದೆ. ಇಂತಹ ಸಂದರ್ಭದಲ್ಲಿ ಉತ್ತರದಾಯಿತ್ವ, ಗುಣಮಟ್ಟದ ಆರೈಕೆ ಹಾಗೂ ವೆಚ್ಚದ ಮೇಲಿನ ನಿಯಂತ್ರಣ ಮುಖ್ಯವಾಗುತ್ತದೆ. </div><div> </div><div> ವೈದ್ಯಕೀಯ ಲೋಕದಲ್ಲೂ ಹಲವು ಸಮಸ್ಯೆಗಳಿವೆ. ಹೀಗಾಗಿ ಘೋಷಿತ ಕಾರ್ಯಕ್ರಮಗಳನ್ನೆಲ್ಲ ಜಾರಿಗೊಳಿಸುವುದು ಹೇಳಿದಷ್ಟು ಸುಲಭವಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಬೇಕಾದುದು ಮುಖ್ಯ.</div><div> </div><div> ಈ ನೀತಿ ಅನುಷ್ಠಾನದ ಜಾರಿಯಲ್ಲಿ ಇರುವ ಅಡೆತಡೆಗಳನ್ನು ನಿವಾರಿಸಿಕೊಳ್ಳುವುದು ಆದ್ಯತೆಯಾಗಬೇಕು. ಮೊದಲಿಗೆ ಆರೋಗ್ಯ ಕ್ಷೇತ್ರದ ವಿಶ್ವಾಸಾರ್ಹತೆ ಹೆಚ್ಚುವುದು ಮುಖ್ಯ. ಎಲ್ಲರಿಗೂ ಸುಲಭ ವೆಚ್ಚದಲ್ಲಿ ಆರೋಗ್ಯ ಸೇವೆಗಳು ದಕ್ಕುವಂತಾಗಬೇಕು. ಇದಕ್ಕಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಅಗತ್ಯ ಮಾನವ ಸಂಪನ್ಮೂಲ ಹೆಚ್ಚಿಸುವುದೂ ಅತ್ಯವಶ್ಯಕ. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>