<p>ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಒತ್ತಾಯಿಸಿ ಜನರು ದೀರ್ಘಕಾಲ ಪ್ರತಿಭಟನೆ, ಧರಣಿ, ಬಂದ್ನಂತಹ ಹೋರಾಟಗಳನ್ನು ಹಮ್ಮಿಕೊಳ್ಳುವುದು ಯಾವುದೇ ಸರ್ಕಾರಕ್ಕೆ ಗೌರವ ತರುವ ವಿಷಯ ಅಲ್ಲ. <br /> <br /> ಸಂವಿಧಾನದ 371ನೇ ಪರಿಚ್ಛೇದಕ್ಕೆ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ಆ ಭಾಗದ ಜನಪರ ಸಂಘಟನೆಗಳು ಕಳೆದ ಎರಡು ದಶಕಗಳಿಂದ ಚಳವಳಿ ಮಾರ್ಗ ಹಿಡಿದಿವೆ. ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ರಾಜ್ಯ ವಿಧಾನ ಸಭೆ ಸರ್ವಾನುಮತದ ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. <br /> <br /> ರಾಜ್ಯ ಸರ್ಕಾರ ನೇತೃತ್ವದಲ್ಲಿ ಸರ್ವ ಪಕ್ಷಗಳ ನಿಯೋಗ ದೆಹಲಿಗೆ ಹೋಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಆದರೂ ಕೇಂದ್ರ ಈ ಬೇಡಿಕೆಯನ್ನು ಪರಿಗಣಿಸಿಲ್ಲ. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಉಪೇಕ್ಷಿಸಿದರೆ ಜನರು ಹತಾಶರಾಗಿ ಹಿಂಸಾ ಮಾರ್ಗ ಹಿಡಿಯುವ ಸಾಧ್ಯತೆಯನ್ನು ತಳ್ಳಿಹಾಕಲಾಗದು. <br /> <br /> ತೆಲಂಗಾಣ ಚಳವಳಿಯೇ ಅದಕ್ಕೆ ಸಾಕ್ಷಿ. ಚಳವಳಿಗೆ ಮಣಿದ ಸರ್ಕಾರ ಸಂವಿಧಾನದ 371ನೇ ಪರಿಚ್ಛೇದಕ್ಕೆ ತಿದ್ದುಪಡಿ ತಂದು ತೆಲಂಗಾಣ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿತು.<br /> <br /> ಆದರೂ ಆ ಪ್ರದೇಶದ ಅಭಿವೃದ್ಧಿ ಕಾಣಲಿಲ್ಲ. ಹತಾಶರಾದ ಜನರು ಪ್ರತ್ಯೇಕ ರಾಜ್ಯಕ್ಕೆ ಪಟ್ಟುಹಿಡಿದು ಹಿಂಸಾತ್ಮಕ ಚಳವಳಿ ನಡೆಸುತ್ತಿದ್ದಾರೆ. ಈ ಬೆಳವಣಿಗೆಯ ನಂತರವೂ ಕೇಂದ್ರ ಸರ್ಕಾರ ಪಾಠ ಕಲಿತಿಲ್ಲ. ಜನರ ನ್ಯಾಯ ಸಮ್ಮತ ಬೇಡಿಕೆಗಳನ್ನು ಪರಿಗಣಿಸದೇ ಇರುವುದು ಪ್ರಜಾತಂತ್ರ ವ್ಯವಸ್ಥೆಗೆ ಮಾಡುವ ಅವಮಾನ. <br /> <br /> ಹೈದರಾಬಾದ್ ಕರ್ನಾಟಕ ಪ್ರದೇಶದ ಜನರ ಬೇಡಿಕೆಗಳ ವಿಷಯದಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ದೀರ್ಘಕಾಲ ಜನರು ಮನವಿ ಪತ್ರ ಸಲ್ಲಿಸುತ್ತಲೇ ಇರಬೇಕು ಎಂದು ಸರ್ಕಾರ ಬಯಸಬಾರದು. <br /> <br /> ಹೈದರಾಬಾದ್ ಕರ್ನಾಟಕ ಪ್ರದೇಶ ಹಿಂದುಳಿದಿದೆ. ಅದಕ್ಕೆ ಚಾರಿತ್ರಿಕ ಕಾರಣಗಳಿವೆ. ಹೈದರಾಬಾದ್ ಕರ್ನಾಟಕ ಮಾತ್ರವೇ ಅಲ್ಲ, ದೇಶದ ಹಿಂದುಳಿದ ಪ್ರದೇಶಗಳೆಲ್ಲವೂ ಅಭಿವೃದ್ಧಿಯಾಗಬೇಕು. <br /> <br /> ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ರೂಪಿಸಿದ ಯೋಜನೆಗಳಿಂದ ಹೆಚ್ಚಿನದೇನೂ ಆಗಿಲ್ಲ. ಪ್ರಾದೇಶಿಕ ಅಸಮಾನತೆ ನಿವಾರಣೆಗಾಗಿ ರಚಿಸಿದ್ದ ಡಾ. ನಂಜುಂಡಪ್ಪ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನವೂ ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. <br /> <br /> ಕೇಂದ್ರ ಗೃಹ ಸಚಿವರಾಗಿದ್ದ ಶಿವರಾಜ ಪಾಟೀಲರು ವಿದರ್ಭ ಮಾದರಿಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿಟ್ಟಿದ್ದರು.<br /> <br /> ಯುಪಿಎ ಮತ್ತು ಹಿಂದಿನ ಎನ್ಡಿಎ ಸರ್ಕಾರಗಳು ಹೈದರಾಬಾದ್ ಕರ್ನಾಟಕ ಪ್ರದೇಶ ಹಿಂದುಳಿದಿದೆ ಎಂಬುದನ್ನು ತಾತ್ವಿಕವಾಗಿ ಒಪ್ಪಿಕೊಂಡಿವೆ. ಚುನಾವಣೆಯ ಸಂದರ್ಭಗಳಲ್ಲಿ ಅಭಿವೃದ್ಧಿಯ ಭರವಸೆ ನೀಡುತ್ತ ಆನಂತರ ನಕಾರಾತ್ಮಕ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. <br /> <br /> ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸುವ ಪ್ರಯತ್ನಗಳು ರಾಜಕೀಯ ಪಕ್ಷಗಳ ಚೌಕಟ್ಟಿನಲ್ಲಿ ನಡೆಯಬಾರದು. ರಾಜಕೀಯವನ್ನು ಬದಿಗಿಟ್ಟು ರಾಜ್ಯ ಸರ್ಕಾರ ಮತ್ತು ಎಲ್ಲ ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಒತ್ತಾಯಿಸಿ ಜನರು ದೀರ್ಘಕಾಲ ಪ್ರತಿಭಟನೆ, ಧರಣಿ, ಬಂದ್ನಂತಹ ಹೋರಾಟಗಳನ್ನು ಹಮ್ಮಿಕೊಳ್ಳುವುದು ಯಾವುದೇ ಸರ್ಕಾರಕ್ಕೆ ಗೌರವ ತರುವ ವಿಷಯ ಅಲ್ಲ. <br /> <br /> ಸಂವಿಧಾನದ 371ನೇ ಪರಿಚ್ಛೇದಕ್ಕೆ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ಆ ಭಾಗದ ಜನಪರ ಸಂಘಟನೆಗಳು ಕಳೆದ ಎರಡು ದಶಕಗಳಿಂದ ಚಳವಳಿ ಮಾರ್ಗ ಹಿಡಿದಿವೆ. ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ರಾಜ್ಯ ವಿಧಾನ ಸಭೆ ಸರ್ವಾನುಮತದ ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. <br /> <br /> ರಾಜ್ಯ ಸರ್ಕಾರ ನೇತೃತ್ವದಲ್ಲಿ ಸರ್ವ ಪಕ್ಷಗಳ ನಿಯೋಗ ದೆಹಲಿಗೆ ಹೋಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಆದರೂ ಕೇಂದ್ರ ಈ ಬೇಡಿಕೆಯನ್ನು ಪರಿಗಣಿಸಿಲ್ಲ. ಪ್ರಜಾಸತ್ತಾತ್ಮಕ ಹೋರಾಟಗಳನ್ನು ಉಪೇಕ್ಷಿಸಿದರೆ ಜನರು ಹತಾಶರಾಗಿ ಹಿಂಸಾ ಮಾರ್ಗ ಹಿಡಿಯುವ ಸಾಧ್ಯತೆಯನ್ನು ತಳ್ಳಿಹಾಕಲಾಗದು. <br /> <br /> ತೆಲಂಗಾಣ ಚಳವಳಿಯೇ ಅದಕ್ಕೆ ಸಾಕ್ಷಿ. ಚಳವಳಿಗೆ ಮಣಿದ ಸರ್ಕಾರ ಸಂವಿಧಾನದ 371ನೇ ಪರಿಚ್ಛೇದಕ್ಕೆ ತಿದ್ದುಪಡಿ ತಂದು ತೆಲಂಗಾಣ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿತು.<br /> <br /> ಆದರೂ ಆ ಪ್ರದೇಶದ ಅಭಿವೃದ್ಧಿ ಕಾಣಲಿಲ್ಲ. ಹತಾಶರಾದ ಜನರು ಪ್ರತ್ಯೇಕ ರಾಜ್ಯಕ್ಕೆ ಪಟ್ಟುಹಿಡಿದು ಹಿಂಸಾತ್ಮಕ ಚಳವಳಿ ನಡೆಸುತ್ತಿದ್ದಾರೆ. ಈ ಬೆಳವಣಿಗೆಯ ನಂತರವೂ ಕೇಂದ್ರ ಸರ್ಕಾರ ಪಾಠ ಕಲಿತಿಲ್ಲ. ಜನರ ನ್ಯಾಯ ಸಮ್ಮತ ಬೇಡಿಕೆಗಳನ್ನು ಪರಿಗಣಿಸದೇ ಇರುವುದು ಪ್ರಜಾತಂತ್ರ ವ್ಯವಸ್ಥೆಗೆ ಮಾಡುವ ಅವಮಾನ. <br /> <br /> ಹೈದರಾಬಾದ್ ಕರ್ನಾಟಕ ಪ್ರದೇಶದ ಜನರ ಬೇಡಿಕೆಗಳ ವಿಷಯದಲ್ಲಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ದೀರ್ಘಕಾಲ ಜನರು ಮನವಿ ಪತ್ರ ಸಲ್ಲಿಸುತ್ತಲೇ ಇರಬೇಕು ಎಂದು ಸರ್ಕಾರ ಬಯಸಬಾರದು. <br /> <br /> ಹೈದರಾಬಾದ್ ಕರ್ನಾಟಕ ಪ್ರದೇಶ ಹಿಂದುಳಿದಿದೆ. ಅದಕ್ಕೆ ಚಾರಿತ್ರಿಕ ಕಾರಣಗಳಿವೆ. ಹೈದರಾಬಾದ್ ಕರ್ನಾಟಕ ಮಾತ್ರವೇ ಅಲ್ಲ, ದೇಶದ ಹಿಂದುಳಿದ ಪ್ರದೇಶಗಳೆಲ್ಲವೂ ಅಭಿವೃದ್ಧಿಯಾಗಬೇಕು. <br /> <br /> ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ರೂಪಿಸಿದ ಯೋಜನೆಗಳಿಂದ ಹೆಚ್ಚಿನದೇನೂ ಆಗಿಲ್ಲ. ಪ್ರಾದೇಶಿಕ ಅಸಮಾನತೆ ನಿವಾರಣೆಗಾಗಿ ರಚಿಸಿದ್ದ ಡಾ. ನಂಜುಂಡಪ್ಪ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನವೂ ಪ್ರಾಮಾಣಿಕವಾಗಿ ನಡೆಯುತ್ತಿಲ್ಲ. <br /> <br /> ಕೇಂದ್ರ ಗೃಹ ಸಚಿವರಾಗಿದ್ದ ಶಿವರಾಜ ಪಾಟೀಲರು ವಿದರ್ಭ ಮಾದರಿಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿಟ್ಟಿದ್ದರು.<br /> <br /> ಯುಪಿಎ ಮತ್ತು ಹಿಂದಿನ ಎನ್ಡಿಎ ಸರ್ಕಾರಗಳು ಹೈದರಾಬಾದ್ ಕರ್ನಾಟಕ ಪ್ರದೇಶ ಹಿಂದುಳಿದಿದೆ ಎಂಬುದನ್ನು ತಾತ್ವಿಕವಾಗಿ ಒಪ್ಪಿಕೊಂಡಿವೆ. ಚುನಾವಣೆಯ ಸಂದರ್ಭಗಳಲ್ಲಿ ಅಭಿವೃದ್ಧಿಯ ಭರವಸೆ ನೀಡುತ್ತ ಆನಂತರ ನಕಾರಾತ್ಮಕ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. <br /> <br /> ವಿಶೇಷ ಸ್ಥಾನಮಾನಕ್ಕೆ ಒತ್ತಾಯಿಸುವ ಪ್ರಯತ್ನಗಳು ರಾಜಕೀಯ ಪಕ್ಷಗಳ ಚೌಕಟ್ಟಿನಲ್ಲಿ ನಡೆಯಬಾರದು. ರಾಜಕೀಯವನ್ನು ಬದಿಗಿಟ್ಟು ರಾಜ್ಯ ಸರ್ಕಾರ ಮತ್ತು ಎಲ್ಲ ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>