<p><strong>ಗಡಿ ಪ್ರಶ್ನೆ: ಇಂದಿರಾ–ನಾಯಕ್ ಚರ್ಚೆ ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಹೊಸ ಸೂತ್ರದ ರಚನೆ</strong><br /><strong>ನವದೆಹಲಿ, ಮಾ. 7–</strong> ಮೇ ತಿಂಗಳಿನಲ್ಲಿ ಸಂಸತ್ ಬಜೆಟ್ ಅಧಿವೇಶನ ಅಂತ್ಯಗೊಳ್ಳುವುದರೊಳಗೆ ಮೈಸೂರು–ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥಕ್ಕೆ ಪ್ರಧಾನಮಂತ್ರಿ ಶ್ರೀಮತಿ ಇಂದಿರಾಗಾಂಧಿಯವರು ಅಖೈರು ಸೂತ್ರವೊಂದನ್ನು ರೂಪಿಸುವ ಸಂಭವವಿದೆ.</p>.<p>ಗಡಿ ವಿವಾದ ಕುರಿತು ಶ್ರೀಮತಿ ಇಂದಿರಾಗಾಂಧಿಯವರೊಡನೆ ಇಂದು ಸುಮಾರು ಅರ್ಧಗಂಟೆ ಕಾಲ ಮಾತುಕತೆ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿಯವರು ನಂತರ ಸುದ್ದಿಗಾರರೊಡನೆ ಮಾತನಾಡುತ್ತ ಈ ವಿಷಯ ತಿಳಿಸಿದರು.</p>.<p><strong>ರಾಷ್ಟ್ರಪತಿಗೆ ಎಂ. ಇ. ಎಸ್ ಮನವಿ ಪತ್ರ</strong><br /><strong>ನವದೆಹಲಿ: ಮಾ.7 –</strong> ಅನೇಕ ದಿನಗಳಿಂದಲೂ ನೆನೆಗುದಿಗೆ ಬಿದ್ದಿರುವ ಮೈಸೂರು ಮಹಾರಾಷ್ಟ್ರ ಗಡಿ ವಿವಾದವನ್ನು ಪಾರ್ಲಿಮೆಂಟ್ ಬಜೆಟ್ ಅಧಿವೇಶನಕ್ಕೂ ಮುಂಚೆ ಇತ್ಯರ್ಥ ಪಡಿಸಬೇಕೆಂದು ಒತ್ತಾಯಪಡಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಿಯೋಗವು ಇಂದು ರಾಷ್ಟ್ರಪತಿ ವಿ. ವಿ. ಗಿರಿ ಅವರಿಗೆ ಮನವಿ ಪತ್ರ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಡಿ ಪ್ರಶ್ನೆ: ಇಂದಿರಾ–ನಾಯಕ್ ಚರ್ಚೆ ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಹೊಸ ಸೂತ್ರದ ರಚನೆ</strong><br /><strong>ನವದೆಹಲಿ, ಮಾ. 7–</strong> ಮೇ ತಿಂಗಳಿನಲ್ಲಿ ಸಂಸತ್ ಬಜೆಟ್ ಅಧಿವೇಶನ ಅಂತ್ಯಗೊಳ್ಳುವುದರೊಳಗೆ ಮೈಸೂರು–ಮಹಾರಾಷ್ಟ್ರ ಗಡಿ ವಿವಾದ ಇತ್ಯರ್ಥಕ್ಕೆ ಪ್ರಧಾನಮಂತ್ರಿ ಶ್ರೀಮತಿ ಇಂದಿರಾಗಾಂಧಿಯವರು ಅಖೈರು ಸೂತ್ರವೊಂದನ್ನು ರೂಪಿಸುವ ಸಂಭವವಿದೆ.</p>.<p>ಗಡಿ ವಿವಾದ ಕುರಿತು ಶ್ರೀಮತಿ ಇಂದಿರಾಗಾಂಧಿಯವರೊಡನೆ ಇಂದು ಸುಮಾರು ಅರ್ಧಗಂಟೆ ಕಾಲ ಮಾತುಕತೆ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿಯವರು ನಂತರ ಸುದ್ದಿಗಾರರೊಡನೆ ಮಾತನಾಡುತ್ತ ಈ ವಿಷಯ ತಿಳಿಸಿದರು.</p>.<p><strong>ರಾಷ್ಟ್ರಪತಿಗೆ ಎಂ. ಇ. ಎಸ್ ಮನವಿ ಪತ್ರ</strong><br /><strong>ನವದೆಹಲಿ: ಮಾ.7 –</strong> ಅನೇಕ ದಿನಗಳಿಂದಲೂ ನೆನೆಗುದಿಗೆ ಬಿದ್ದಿರುವ ಮೈಸೂರು ಮಹಾರಾಷ್ಟ್ರ ಗಡಿ ವಿವಾದವನ್ನು ಪಾರ್ಲಿಮೆಂಟ್ ಬಜೆಟ್ ಅಧಿವೇಶನಕ್ಕೂ ಮುಂಚೆ ಇತ್ಯರ್ಥ ಪಡಿಸಬೇಕೆಂದು ಒತ್ತಾಯಪಡಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಿಯೋಗವು ಇಂದು ರಾಷ್ಟ್ರಪತಿ ವಿ. ವಿ. ಗಿರಿ ಅವರಿಗೆ ಮನವಿ ಪತ್ರ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>