ಶ್ರೀಮತಿ ಗಾಂಧಿಯವರನ್ನು ಕೊಲೆ ಮಾಡಿಸಲು ಪಿತೂರಿ ನಡೆಯುತ್ತಿದೆಯೆಂಬ ವರದಿಯನ್ನು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಅಧಿಕಾರಾರೂಢ ಕಾಂಗ್ರೆಸ್ಸಿನ ಅಮರಸಿಂಗ್ ಸೈಗಾಲ್ ಅವರು ಈ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡಬೇಕೆಂದು ಕೇಳಿದರು. ಇದು ತುಂಬ ಅಪಾಯಕಾರಿ ಮತ್ತು ಕಳವಳವನ್ನುಂಟು ಮಾಡುವ ವರದಿ ಎಂದು ನುಡಿದ ಸೈಗಾಲ್ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈ ಪಿತೂರಿಯಲ್ಲಿ ಸೇರಿಕೊಂಡಿದೆಯೆಂದು ಆಪಾದಿಸಿದರು.