ಕಾವೇರಿ ಜಲ ವಿವಾದ: ಕೇಂದ್ರದ ಮಧ್ಯಪ್ರವೇಶಕ್ಕೆ ಕರುಣಾನಿಧಿ ಒತ್ತಾಯ
ಮದ್ರಾಸ್, ಮಾರ್ಚ್ 3– ತಮಿಳುನಾಡು ಮತ್ತು ಮೈಸೂರು ರಾಜ್ಯಗಳ ನಡುವಣ ಕಾವೇರಿ ಜಲ ವಿವಾದದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕೆಂದೂ ಸಮಸ್ಯೆಯ ಇತ್ಯರ್ಥ ಇನ್ನು ತಡವಾದರೆ ಅಪಾಯಕಾರಿ ಪರಿಣಾಮಗಳು ಉಂಟಾಗುವುವೆಂದೂ ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ಎಂ.ಕರುಣಾನಿಧಿ ಅವರು ಇಂದು ವಿಧಾನಸಭೆಯಲ್ಲಿ ತಿಳಿಸಿದರು.