<p><strong>ರಾಜ್ಯಸಭೆಗೆ ಡಾ.ಆಳ್ವಾ, ನಾಗರಾಜಮೂರ್ತಿ, ಮುಲ್ಕಾ, ಮಲ್ಲೇಗೌಡ<br />ಬೆಂಗಳೂರು ಮಾ.28–</strong> ಸಂಸ್ಥಾ ಕಾಂಗ್ರೆಸ್ಸಿನ ಡಾ. ಕೆ. ನಾಗಪ್ಪ ಆಳ್ವ ಮತ್ತು ಬಿ.ಸಿ. ನಾಗರಾಜಮೂರ್ತಿ, ಪಿಎಸ್.ಪಿ.ಯ ಶ್ರೀ ಮುಲ್ಕಾ ಗೋವಿಂದರೆಡ್ಡಿ ಮತ್ತು ಪಕ್ಷೇತರರಾದ ಶ್ರೀ ಕೆ.ಎಸ್. ಮಲ್ಲೇಗೌಡ ಅವರುಗಳು ಇಂದು ರಾಜ್ಯಸಭೆಗೆ ಚುನಾಯಿತರಾದರು.</p>.<p>ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಎಂಟು ಮಂದಿ ಸ್ಪರ್ಧಿಸಿದ್ದು ಸಂಸ್ಥಾ ಕಾಂಗ್ರೆಸ್ಸಿನ ಮೂರನೇ ಅಭ್ಯರ್ಥಿ ಎಂ.ಎಲ್. ನಂಜರಾಜೇ ಅರಸ್ ಹಾಗೂ ಆಡಳಿತ ಕಾಂಗ್ರೆಸ್ಸಿನ ಎ.ವಿ ಪಾಟೀಲ್ ಅವರುಗಳು ಸೂತು ಹೋದರು.</p>.<p>ವಿಧಾನಸಭೆಯ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯ ಸಂಖ್ಯೆಗಿಂತ ಏ.ವಿ. ಪಾಟೀಲ್ ಅವರು ಹೆಚ್ಚು ಮತಗಳನ್ನು ಗಳಿಸಿದರೂ, ಇನ್ನೂ ಮೂರು ವೋಟುಗಳನ್ನು ಗಳಿಸಿದ್ದರೆ, ಜಯಪಡೆಯುತ್ತಿದ್ದರು.</p>.<p><strong>ಪಂಚಾಯಿತಿ ರಾಜ್ಯ ಹೊಸ ವಿಧೇಯಕ<br />ಬೆಂಗಳೂರು ಮಾ.28–</strong> ಬಹುಕಾಲದಿಂದ ನಿರೀಕ್ಷಿಸಲಾಗಿದ್ದ ಪಂಚಾಯಿತಿ ರಾಜ್ಯದ ಮೂರನೇ ಹಂತವಾದ ಜಿಲ್ಲಾ ಪರಿಷತ್ತಿನ ರಚನೆ ಹಾಗೂ ನ್ಯಾಯ ಪಂಚಾಯ್ತಿಗಳ ನೇಮಕಕ್ಕೆ ಅವಕಾಶ ನೀಡುವ ಮೈಸೂರು ಪಂಚಾಯಿತಿ ರಾಜ್ಯ ವಿಧೇಯಕವನ್ನು ಅಭಿವೃದ್ಧಿ ಸಚಿವ ಪಿ.ಎಂ. ನಾಡಗೌಡ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯಸಭೆಗೆ ಡಾ.ಆಳ್ವಾ, ನಾಗರಾಜಮೂರ್ತಿ, ಮುಲ್ಕಾ, ಮಲ್ಲೇಗೌಡ<br />ಬೆಂಗಳೂರು ಮಾ.28–</strong> ಸಂಸ್ಥಾ ಕಾಂಗ್ರೆಸ್ಸಿನ ಡಾ. ಕೆ. ನಾಗಪ್ಪ ಆಳ್ವ ಮತ್ತು ಬಿ.ಸಿ. ನಾಗರಾಜಮೂರ್ತಿ, ಪಿಎಸ್.ಪಿ.ಯ ಶ್ರೀ ಮುಲ್ಕಾ ಗೋವಿಂದರೆಡ್ಡಿ ಮತ್ತು ಪಕ್ಷೇತರರಾದ ಶ್ರೀ ಕೆ.ಎಸ್. ಮಲ್ಲೇಗೌಡ ಅವರುಗಳು ಇಂದು ರಾಜ್ಯಸಭೆಗೆ ಚುನಾಯಿತರಾದರು.</p>.<p>ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಎಂಟು ಮಂದಿ ಸ್ಪರ್ಧಿಸಿದ್ದು ಸಂಸ್ಥಾ ಕಾಂಗ್ರೆಸ್ಸಿನ ಮೂರನೇ ಅಭ್ಯರ್ಥಿ ಎಂ.ಎಲ್. ನಂಜರಾಜೇ ಅರಸ್ ಹಾಗೂ ಆಡಳಿತ ಕಾಂಗ್ರೆಸ್ಸಿನ ಎ.ವಿ ಪಾಟೀಲ್ ಅವರುಗಳು ಸೂತು ಹೋದರು.</p>.<p>ವಿಧಾನಸಭೆಯ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯ ಸಂಖ್ಯೆಗಿಂತ ಏ.ವಿ. ಪಾಟೀಲ್ ಅವರು ಹೆಚ್ಚು ಮತಗಳನ್ನು ಗಳಿಸಿದರೂ, ಇನ್ನೂ ಮೂರು ವೋಟುಗಳನ್ನು ಗಳಿಸಿದ್ದರೆ, ಜಯಪಡೆಯುತ್ತಿದ್ದರು.</p>.<p><strong>ಪಂಚಾಯಿತಿ ರಾಜ್ಯ ಹೊಸ ವಿಧೇಯಕ<br />ಬೆಂಗಳೂರು ಮಾ.28–</strong> ಬಹುಕಾಲದಿಂದ ನಿರೀಕ್ಷಿಸಲಾಗಿದ್ದ ಪಂಚಾಯಿತಿ ರಾಜ್ಯದ ಮೂರನೇ ಹಂತವಾದ ಜಿಲ್ಲಾ ಪರಿಷತ್ತಿನ ರಚನೆ ಹಾಗೂ ನ್ಯಾಯ ಪಂಚಾಯ್ತಿಗಳ ನೇಮಕಕ್ಕೆ ಅವಕಾಶ ನೀಡುವ ಮೈಸೂರು ಪಂಚಾಯಿತಿ ರಾಜ್ಯ ವಿಧೇಯಕವನ್ನು ಅಭಿವೃದ್ಧಿ ಸಚಿವ ಪಿ.ಎಂ. ನಾಡಗೌಡ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>