<p><strong>ಅರ್ಥಶಾಖೆಯಲ್ಲಿ ಪ್ರಧಾನಿಗೆ ಚಿನ್ನದ ತಾಯತ ನೀಡಿದರೆ?</strong></p>.<p><strong>ನವದೆಹಲಿ, ಏ. 6– </strong>ಅಕ್ರಮ ಸಾಗಾಣಿಕೆ ಸಂಬಂಧದಲ್ಲಿ ಹಣಕಾಸು ಶಾಖೆಯಲ್ಲಿರುವ ಹಿಂದಿ ಅಧಿಕಾರಿ ವಿರುದ್ಧ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸುವುದಾಗಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಇಂದು ಲೋಕಸಭೆಗೆ ತಿಳಿಸಿದರು.</p>.<p>ಪ್ರಧಾನಿಗೆ ಈ ಅಧಿಕಾರಿಯು ಚಿನ್ನದ ತಾಯತವೊಂದನ್ನು ಕೊಟ್ಟಿದ್ದಾರೆ. ಹೀಗಾಗಿ, ಅಕ್ರಮ ಸಾಗಾಣಿಕೆ ಸಂಬಂಧದಲ್ಲಿ ವಿದೇಶಿಯನೊಬ್ಬನೊಡನೆ ಸಂಪರ್ಕ ಹೊಂದಿರುವ ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡಿಲ್ಲವೆಂಬ ಆರೋಪವನ್ನು ಹಣಕಾಸು ಶಾಖೆಯ ಸ್ಟೇಟ್ ಸಚಿವ ಶ್ರೀ ಪಿ.ಸಿ.ಸೇಠಿ ನಿರಾಕರಿಸಿದರು.</p>.<p>ಸಚಿವರಾರಿಗೂ ಅವರು ಯಾವುದೇ ತಾಯತ ಕೊಟ್ಟಿಲ್ಲವೆಂದು ತಿಳಿಸಿದರು.</p>.<p><strong>ನಿರುದ್ಯೋಗದ ವಿರುದ್ಧ ಎಸ್ಸೆಸ್ಪಿ ಪ್ರದರ್ಶನ: ಹಲವರಿಗೆ ಪೆಟ್ಟು</strong></p>.<p><strong>ನವದೆಹಲಿ, ಏ. 6– </strong>ಸಾಲುಗಟ್ಟಿ ನಿಂತಿದ್ದ ಪೊಲೀಸರ ವ್ಯೂಹ ಭೇದಿಸಿಕೊಂಡು ಸಂಸತ್ ಭವನದತ್ತ ನುಗ್ಗಲು ಪ್ರಯತ್ನಿಸಿದ ಸಂಯುಕ್ತ ಸಮಾಜವಾದಿ ಪಕ್ಷದ ಉದ್ರಿಕ್ತ ಪ್ರದರ್ಶನಕಾರರನ್ನು ಚದುರಿಸಲು ಪೊಲೀಸರು ಇಂದು ಇಲ್ಲಿ ಲಾಠಿಪ್ರಹಾರ ಮಾಡಿ ನಂತರ ಸುಮಾರು ಇಪ್ಪತ್ನಾಲ್ಕು ಅಶ್ರುವಾಯು ಷೆಲ್ಗಳನ್ನು ಹಾರಿಸಿದರು.</p>.<p>ಬೆತ್ತದ ಪ್ರಹಾರ ಮಾಡಿದಾಗ ಸಂಯುಕ್ತ ಸೋಷಲಿಸ್ಟ್ ನಾಯಕ, ಸಂಸತ್ ಸದಸ್ಯರಾದ ಜಾರ್ಜ್ ಫರ್ನಾಂಡಿಸ್, ಮಧುಲಿಮಯೆ, ಎಸ್ಸೆಸ್ಪಿ ಅಧ್ಯಕ್ಷ ಕರ್ಪೂರಿ ಠಾಕೂರ್ ಅವರೂ ಸೇರಿ ಐವತ್ತು ಜನಕ್ಕೆ ಗಾಯವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರ್ಥಶಾಖೆಯಲ್ಲಿ ಪ್ರಧಾನಿಗೆ ಚಿನ್ನದ ತಾಯತ ನೀಡಿದರೆ?</strong></p>.<p><strong>ನವದೆಹಲಿ, ಏ. 6– </strong>ಅಕ್ರಮ ಸಾಗಾಣಿಕೆ ಸಂಬಂಧದಲ್ಲಿ ಹಣಕಾಸು ಶಾಖೆಯಲ್ಲಿರುವ ಹಿಂದಿ ಅಧಿಕಾರಿ ವಿರುದ್ಧ ಮಾಡಿರುವ ಆರೋಪ ಕುರಿತು ವಿಚಾರಣೆ ನಡೆಸುವುದಾಗಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಇಂದು ಲೋಕಸಭೆಗೆ ತಿಳಿಸಿದರು.</p>.<p>ಪ್ರಧಾನಿಗೆ ಈ ಅಧಿಕಾರಿಯು ಚಿನ್ನದ ತಾಯತವೊಂದನ್ನು ಕೊಟ್ಟಿದ್ದಾರೆ. ಹೀಗಾಗಿ, ಅಕ್ರಮ ಸಾಗಾಣಿಕೆ ಸಂಬಂಧದಲ್ಲಿ ವಿದೇಶಿಯನೊಬ್ಬನೊಡನೆ ಸಂಪರ್ಕ ಹೊಂದಿರುವ ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡಿಲ್ಲವೆಂಬ ಆರೋಪವನ್ನು ಹಣಕಾಸು ಶಾಖೆಯ ಸ್ಟೇಟ್ ಸಚಿವ ಶ್ರೀ ಪಿ.ಸಿ.ಸೇಠಿ ನಿರಾಕರಿಸಿದರು.</p>.<p>ಸಚಿವರಾರಿಗೂ ಅವರು ಯಾವುದೇ ತಾಯತ ಕೊಟ್ಟಿಲ್ಲವೆಂದು ತಿಳಿಸಿದರು.</p>.<p><strong>ನಿರುದ್ಯೋಗದ ವಿರುದ್ಧ ಎಸ್ಸೆಸ್ಪಿ ಪ್ರದರ್ಶನ: ಹಲವರಿಗೆ ಪೆಟ್ಟು</strong></p>.<p><strong>ನವದೆಹಲಿ, ಏ. 6– </strong>ಸಾಲುಗಟ್ಟಿ ನಿಂತಿದ್ದ ಪೊಲೀಸರ ವ್ಯೂಹ ಭೇದಿಸಿಕೊಂಡು ಸಂಸತ್ ಭವನದತ್ತ ನುಗ್ಗಲು ಪ್ರಯತ್ನಿಸಿದ ಸಂಯುಕ್ತ ಸಮಾಜವಾದಿ ಪಕ್ಷದ ಉದ್ರಿಕ್ತ ಪ್ರದರ್ಶನಕಾರರನ್ನು ಚದುರಿಸಲು ಪೊಲೀಸರು ಇಂದು ಇಲ್ಲಿ ಲಾಠಿಪ್ರಹಾರ ಮಾಡಿ ನಂತರ ಸುಮಾರು ಇಪ್ಪತ್ನಾಲ್ಕು ಅಶ್ರುವಾಯು ಷೆಲ್ಗಳನ್ನು ಹಾರಿಸಿದರು.</p>.<p>ಬೆತ್ತದ ಪ್ರಹಾರ ಮಾಡಿದಾಗ ಸಂಯುಕ್ತ ಸೋಷಲಿಸ್ಟ್ ನಾಯಕ, ಸಂಸತ್ ಸದಸ್ಯರಾದ ಜಾರ್ಜ್ ಫರ್ನಾಂಡಿಸ್, ಮಧುಲಿಮಯೆ, ಎಸ್ಸೆಸ್ಪಿ ಅಧ್ಯಕ್ಷ ಕರ್ಪೂರಿ ಠಾಕೂರ್ ಅವರೂ ಸೇರಿ ಐವತ್ತು ಜನಕ್ಕೆ ಗಾಯವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>