<p><strong>ಸಾಧ್ಯವಾದರೆ ಹೆಚ್ಚು ಸರ್ಕಾರಿ ಸಮಾರಂಭಕ್ಕೆ ಪ್ರಧಾನಿ ಸಿದ್ಧ<br />ನವದೆಹಲಿ, ಜುಲೈ 15–</strong> ಮೈಸೂರು ರಾಜ್ಯದಲ್ಲಿ ತಮ್ಮ ಪ್ರವಾಸ ಕಾಲದಲ್ಲಿ ಕಾರ್ಯಕ್ರಮದಲ್ಲಿ ಅಳವಡಿಸಲು ಸಾಧ್ಯವಾಗುವುದಾದರೆ, ಹೆಚ್ಚಿನ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತಮ್ಮ ಅಭ್ಯಂತರವೇನಿಲ್ಲ ಎಂದು ಪ್ರಧಾನಿ ಇಂದಿರಾ ಗಾಂಧಿಯವರು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.</p>.<p>ತಮ್ಮ ಮೂರು ದಿನಗಳ ಪ್ರವಾಸ ಕಾಲದಲ್ಲಿ ಸಾಧ್ಯವಾದರೆ ಇತರ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮೈಸೂರು ಸರ್ಕಾರ ಏರ್ಪಡಿಸಲು ಬಯಸಿರುವ ಇನ್ನೂ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತಮಗೆ ತುಂಬಾ ಸಂತೋಷ ಎಂದೂ ಪ್ರಧಾನಿಯವರು ಹೇಳಿದ್ದಾರೆ.</p>.<p>ಪ್ರವಾಸ ಕಾರ್ಯಕ್ರಮದ ಬಗ್ಗೆ ವೀರೇಂದ್ರ ಪಾಟೀಲರು ತಮ್ಮ ನಿರಾಶೆವ್ಯಕ್ತಪಡಿಸಿದರೆಂಬ ವರದಿ ಬಂದ ನಂತರ ಈ ಪತ್ರವನ್ನು ಬರೆಯಲಾಗಿದೆ. ಪ್ರಧಾನಿಯವರ ಪ್ರವಾಸ ಕಾರ್ಯಕ್ರಮದ ಕುರಿತು ವೀರೇಂದ್ರ ಪಾಟೀಲರು ನಿರಾಶೆ ವ್ಯಕ್ತಪಡಿಸಿದ ಬಗ್ಗೆ ಪ್ರಧಾನಿಯ ಸಮೀಪ ವಲಯಗಳಲ್ಲಿ ಅಚ್ಚರಿ ಮೂಡಿದೆ.</p>.<p><strong>ಮತದಾನದ ವಯೋಮಿತಿ ಇಳಿಕೆಗೆ ಒತ್ತಾಯ ಸಂಭವ<br />ಬೆಂಗಳೂರು, ಜುಲೈ 15– </strong>ಮೈಸೂರಿನಲ್ಲಿ ಜುಲೈ 20ರಂದು ಪ್ರಧಾನಿ ಉದ್ಘಾಟಿಸುವ ಆಡಳಿತ ಕಾಂಗ್ರೆಸ್ಸಿನ ರಾಜ್ಯ ರಾಜಕೀಯ ಸಮ್ಮೇಳನವು ಮತದಾನದ ವಯೋಮಿತಿಯನ್ನು 21ರಿಂದ 18 ವರ್ಷಕ್ಕಿಳಿಸಬೇಕೆಂದು ಒತ್ತಾಯ ಮಾಡುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಧ್ಯವಾದರೆ ಹೆಚ್ಚು ಸರ್ಕಾರಿ ಸಮಾರಂಭಕ್ಕೆ ಪ್ರಧಾನಿ ಸಿದ್ಧ<br />ನವದೆಹಲಿ, ಜುಲೈ 15–</strong> ಮೈಸೂರು ರಾಜ್ಯದಲ್ಲಿ ತಮ್ಮ ಪ್ರವಾಸ ಕಾಲದಲ್ಲಿ ಕಾರ್ಯಕ್ರಮದಲ್ಲಿ ಅಳವಡಿಸಲು ಸಾಧ್ಯವಾಗುವುದಾದರೆ, ಹೆಚ್ಚಿನ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತಮ್ಮ ಅಭ್ಯಂತರವೇನಿಲ್ಲ ಎಂದು ಪ್ರಧಾನಿ ಇಂದಿರಾ ಗಾಂಧಿಯವರು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.</p>.<p>ತಮ್ಮ ಮೂರು ದಿನಗಳ ಪ್ರವಾಸ ಕಾಲದಲ್ಲಿ ಸಾಧ್ಯವಾದರೆ ಇತರ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮೈಸೂರು ಸರ್ಕಾರ ಏರ್ಪಡಿಸಲು ಬಯಸಿರುವ ಇನ್ನೂ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತಮಗೆ ತುಂಬಾ ಸಂತೋಷ ಎಂದೂ ಪ್ರಧಾನಿಯವರು ಹೇಳಿದ್ದಾರೆ.</p>.<p>ಪ್ರವಾಸ ಕಾರ್ಯಕ್ರಮದ ಬಗ್ಗೆ ವೀರೇಂದ್ರ ಪಾಟೀಲರು ತಮ್ಮ ನಿರಾಶೆವ್ಯಕ್ತಪಡಿಸಿದರೆಂಬ ವರದಿ ಬಂದ ನಂತರ ಈ ಪತ್ರವನ್ನು ಬರೆಯಲಾಗಿದೆ. ಪ್ರಧಾನಿಯವರ ಪ್ರವಾಸ ಕಾರ್ಯಕ್ರಮದ ಕುರಿತು ವೀರೇಂದ್ರ ಪಾಟೀಲರು ನಿರಾಶೆ ವ್ಯಕ್ತಪಡಿಸಿದ ಬಗ್ಗೆ ಪ್ರಧಾನಿಯ ಸಮೀಪ ವಲಯಗಳಲ್ಲಿ ಅಚ್ಚರಿ ಮೂಡಿದೆ.</p>.<p><strong>ಮತದಾನದ ವಯೋಮಿತಿ ಇಳಿಕೆಗೆ ಒತ್ತಾಯ ಸಂಭವ<br />ಬೆಂಗಳೂರು, ಜುಲೈ 15– </strong>ಮೈಸೂರಿನಲ್ಲಿ ಜುಲೈ 20ರಂದು ಪ್ರಧಾನಿ ಉದ್ಘಾಟಿಸುವ ಆಡಳಿತ ಕಾಂಗ್ರೆಸ್ಸಿನ ರಾಜ್ಯ ರಾಜಕೀಯ ಸಮ್ಮೇಳನವು ಮತದಾನದ ವಯೋಮಿತಿಯನ್ನು 21ರಿಂದ 18 ವರ್ಷಕ್ಕಿಳಿಸಬೇಕೆಂದು ಒತ್ತಾಯ ಮಾಡುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>