ಪ್ರಧಾನಿಗೆ ಮುಖ್ಯಮಂತ್ರಿ ಪತ್ರ
ಬೆಂಗಳೂರು, ಜುಲೈ 14– ರಾಜ್ಯದಲ್ಲಿ ಪ್ರಧಾನಿ ಪ್ರವಾಸ ಮಾಡುವ ಮುನ್ನ ರಾಜ್ಯದ ಮುಖ್ಯಮಂತ್ರಿಯೊಡನೆ ಸಮಾಲೋಚನೆ ನಡೆಸುವ ಸಂಪ್ರದಾಯವನ್ನು ಅನುಸರಿಸದಿರುವ ಬಗ್ಗೆ ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಅವರು ತಮಗೆ ಉಂಟಾಗಿರುವ ‘ನಿಜವಾದ ನಿರಾಶೆ ಹಾಗೂ ಅಸಂತೋಷವನ್ನು’ ಪ್ರಧಾನಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.