<p><strong>ಪ್ರಧಾನಿಗೆ ಮುಖ್ಯಮಂತ್ರಿ ಪತ್ರ<br />ಬೆಂಗಳೂರು, ಜುಲೈ 14–</strong> ರಾಜ್ಯದಲ್ಲಿ ಪ್ರಧಾನಿ ಪ್ರವಾಸ ಮಾಡುವ ಮುನ್ನ ರಾಜ್ಯದ ಮುಖ್ಯಮಂತ್ರಿಯೊಡನೆ ಸಮಾಲೋಚನೆ ನಡೆಸುವ ಸಂಪ್ರದಾಯವನ್ನು ಅನುಸರಿಸದಿರುವ ಬಗ್ಗೆ ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಅವರು ತಮಗೆ ಉಂಟಾಗಿರುವ ‘ನಿಜವಾದ ನಿರಾಶೆ ಹಾಗೂ ಅಸಂತೋಷವನ್ನು’ ಪ್ರಧಾನಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.</p>.<p><strong>ಮುರ್ನಾಳ್ ಆಡಳಿತ ಕಾಂಗ್ರೆಸ್ಸಿಗೆ<br />ಬೆಂಗಳೂರು, ಜುಲೈ 14–</strong> ಬಾಗಲಕೋಟೆಯಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಸಂಸ್ಥಾ ಕಾಂಗ್ರೆಸ್ ಸದಸ್ಯ ಶ್ರೀ ಬಿ.ಟಿ.ಮುರ್ನಾಳ್ ಅವರು ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.</p>.<p>ಕಾಂಗ್ರೆಸ್ ಎರಡು ಪಕ್ಷಗಳಾಗಿ ಒಡೆದ ನಂತರ ರಾಜ್ಯದಲ್ಲಿ ಆಡಳಿತ ಕಾಂಗ್ರೆಸ್ಸಿಗೆ ಸೇರುತ್ತಿರುವ ಪ್ರಥಮ ಸಂಸ್ಥಾ ಕಾಂಗ್ರೆಸ್ ಶಾಸಕರಿವರು.</p>.<p>ಶ್ರೀ ಮುರ್ನಾಳ್ ಅವರು ಸಂಸ್ಥಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ನಿಜಲಿಂಗಪ್ಪ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿದ್ದರು. ಬಾಗಲಕೋಟೆಯಿಂದ ಗೆದ್ದಿದ್ದ ಶ್ರೀ ಮುರ್ನಾಳ್ ಅವರು ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಶ್ರೀ ನಿಜಲಿಂಗಪ್ಪ ಅವರು ಆರಿಸಿ ಬರಲು ಅವಕಾಶಮಾಡಿಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಧಾನಿಗೆ ಮುಖ್ಯಮಂತ್ರಿ ಪತ್ರ<br />ಬೆಂಗಳೂರು, ಜುಲೈ 14–</strong> ರಾಜ್ಯದಲ್ಲಿ ಪ್ರಧಾನಿ ಪ್ರವಾಸ ಮಾಡುವ ಮುನ್ನ ರಾಜ್ಯದ ಮುಖ್ಯಮಂತ್ರಿಯೊಡನೆ ಸಮಾಲೋಚನೆ ನಡೆಸುವ ಸಂಪ್ರದಾಯವನ್ನು ಅನುಸರಿಸದಿರುವ ಬಗ್ಗೆ ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಅವರು ತಮಗೆ ಉಂಟಾಗಿರುವ ‘ನಿಜವಾದ ನಿರಾಶೆ ಹಾಗೂ ಅಸಂತೋಷವನ್ನು’ ಪ್ರಧಾನಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.</p>.<p><strong>ಮುರ್ನಾಳ್ ಆಡಳಿತ ಕಾಂಗ್ರೆಸ್ಸಿಗೆ<br />ಬೆಂಗಳೂರು, ಜುಲೈ 14–</strong> ಬಾಗಲಕೋಟೆಯಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಸಂಸ್ಥಾ ಕಾಂಗ್ರೆಸ್ ಸದಸ್ಯ ಶ್ರೀ ಬಿ.ಟಿ.ಮುರ್ನಾಳ್ ಅವರು ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.</p>.<p>ಕಾಂಗ್ರೆಸ್ ಎರಡು ಪಕ್ಷಗಳಾಗಿ ಒಡೆದ ನಂತರ ರಾಜ್ಯದಲ್ಲಿ ಆಡಳಿತ ಕಾಂಗ್ರೆಸ್ಸಿಗೆ ಸೇರುತ್ತಿರುವ ಪ್ರಥಮ ಸಂಸ್ಥಾ ಕಾಂಗ್ರೆಸ್ ಶಾಸಕರಿವರು.</p>.<p>ಶ್ರೀ ಮುರ್ನಾಳ್ ಅವರು ಸಂಸ್ಥಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ನಿಜಲಿಂಗಪ್ಪ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿದ್ದರು. ಬಾಗಲಕೋಟೆಯಿಂದ ಗೆದ್ದಿದ್ದ ಶ್ರೀ ಮುರ್ನಾಳ್ ಅವರು ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಶ್ರೀ ನಿಜಲಿಂಗಪ್ಪ ಅವರು ಆರಿಸಿ ಬರಲು ಅವಕಾಶಮಾಡಿಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>