ಮೈಸೂರು, ಜುಲೈ 6– ರಾಜ್ಯದ ಯಾವುದಾದರೊಂದು ಪ್ರದೇಶ ಅಥವಾ ಒಂದು ಪಂಗಡಕ್ಕೆ ಅನ್ಯಾಯವಾಗಿದ್ದರೆ ಅದರ ನಿವಾರಣೆಗಾಗಿ ತಾವು ಹೋರಾಟ ಮಾಡಲು ಸಿದ್ಧವಿರುವುದಾಗಿಯೂ ಆದರೆ ಮೈಸೂರು ಎರಡು ರಾಜ್ಯವಾಗುವುದನ್ನು ತಾವು ಖಂಡಿತಾ ಒಪ್ಪುವುದಿಲ್ಲವೆಂದೂ ರಾಜ್ಯದ ವ್ಯವಸಾಯ ಸಚಿವ ಶ್ರೀ ಬಿ. ರಾಚಯ್ಯನವರು ಇಂದು ಇಲ್ಲಿ ಘೋಷಿಸಿದರು.