ಲಖನೌ, ನ. 25– ವಿಧಾನಸಭೆಯಲ್ಲಿ ತಾವು ಬಹುಮತ ಕಳೆದುಕೊಂಡಿರುವುದಾಗಿ ಸ್ವತಃ ಒಪ್ಪಿಕೊಂಡಿದ್ದರೂ ಭಾನುವಾರ ಸಂಪುಟವನ್ನು ವಿಸ್ತರಿಸಿ ಮುಖ್ಯಮಂತ್ರಿ ಸಿ.ಬಿ. ಗುಪ್ತಾರವರು ತಪ್ಪೆಸಗಿದ್ದಾರೆಂದು ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ಉತ್ತರ ಪ್ರದೇಶ ಕಾಂಗ್ರೆಸ್ಸಿನ ಅಧ್ಯಕ್ಷ ಕಮಲಾಪತಿ ತ್ರಿಪಾಠಿಯವರು ಇಂದು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.