ಬೆಂಗಳೂರು, ಡಿ. 19– ತಮ್ಮನ್ನು ಶ್ರೀ ನಿಜಲಿಂಗಪ್ಪ ಅವರು ಕಾಂಗ್ರೆಸ್ಸಿನಿಂದ ವಜಾ ಮಾಡಿರುವುದನ್ನು ವರದಿಗಾರರು ಪ್ರಸ್ತಾಪಿಸಿದಾಗ ಪ್ರಧಾನಿ ಕಾಂಗ್ರೆಸ್ಸಿನ ರಾಜ್ಯ ಅಡ್ಹಾಕ್ ಸಮಿತಿಯ ಸಂಚಾಲಕ ಶ್ರೀ ಡಿ. ದೇವರಾಜ ಅರಸ್ ಅವರು, ‘ಇದರ ಬಗ್ಗೆ ನಗುವುದೊಂದನ್ನು ಬಿಟ್ಟರೆ ಬೇರೆ ಯಾವ ಪ್ರತಿಕ್ರಿಯೆಯೂ ಇಲ್ಲ’ ಎಂದು ಹೇಳಿದರು.