<p><strong>ಇತರ ಪಕ್ಷಗಳ ಜತೆ ಮೈತ್ರಿ: ಸಾಧ್ಯತೆ ತಳ್ಳಿಹಾಕಲಾಗದು– ಎಸ್ಸೆನ್</strong></p>.<p>ಗಾಂಧಿನಗರ, ಡಿ. 19– ತಮ್ಮ ಪಕ್ಷ ಹಾಗೂ ಇತರ ಪಕ್ಷಗಳ ನಡುವೆ ಮೈತ್ರಿ ಅಥವಾ ಚುನಾವಣಾ ಹೊಂದಾಣಿಕೆ ಮಾಡಿಕೊಳ್ಳುವುದನ್ನು ತಳ್ಳಿಹಾಕುವುದಕ್ಕೆ ಆಗುವು ದಿಲ್ಲವೆಂದು ವಿರೋಧಿ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್. ನಿಜಲಿಂಗಪ್ಪನವರು ಹೇಳಿದರು.</p>.<p>ಪಕ್ಷದ ಪೂರ್ಣಾಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಆಗಮಿಸಿದ ಶ್ರೀ ಎಸ್. ನಿಜಲಿಂಗಪ್ಪ ಅವರು ಪತ್ರಕರ್ತರ ಜತೆ ಮಾತನಾಡುತ್ತಿದ್ದಾಗ, ಕಾಂಗ್ರೆಸ್ ಪಕ್ಷದಲ್ಲಿ ಒಡಕು ಉಂಟಾಗಿರುವುದರಿಂದ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿಯೂ ‘ಒಂಟಿಯಾಗಿಯೇ’ ಹೋಗುವ ತತ್ವವನ್ನು ನೀವು ಇನ್ನೂ ಒತ್ತಿ ಹೇಳುತ್ತೀರಾ ಎಂದು ಪ್ರಶ್ನಿಸಲಾಯಿತು.</p>.<p>ಈ ವಿಷಯವನ್ನು ತಾವು ಇನ್ನೂ ತೀವ್ರವಾಗಿ ಆಲೋಚಿಸಬೇಕಾಗಿದೆ ಯೆಂದೂ, ಸಜೀವ ಸಂಸ್ಥೆ ಬಲಗೊಳ್ಳುವಂತೆ ಮಾಡಬೇಕಾಗಿದೆಯೆಂದೂ, ಅಧಿಕ ಸಂಖ್ಯೆಯಲ್ಲಿ ಜನರು ತಮ್ಮ ಜತೆ ಸೇರುವರೆಂದು ತಾವು ನಿರೀಕ್ಷಿಸುವುದಾ ಗಿಯೂ ಅವರು ತಿಳಿಸಿದರು.</p>.<p><strong>ನಗೆಯೊಂದೇ ಪ್ರತಿಕ್ರಿಯೆ</strong></p>.<p>ಬೆಂಗಳೂರು, ಡಿ. 19– ತಮ್ಮನ್ನು ಶ್ರೀ ನಿಜಲಿಂಗಪ್ಪ ಅವರು ಕಾಂಗ್ರೆಸ್ಸಿನಿಂದ ವಜಾ ಮಾಡಿರುವುದನ್ನು ವರದಿಗಾರರು ಪ್ರಸ್ತಾಪಿಸಿದಾಗ ಪ್ರಧಾನಿ ಕಾಂಗ್ರೆಸ್ಸಿನ ರಾಜ್ಯ ಅಡ್ಹಾಕ್ ಸಮಿತಿಯ ಸಂಚಾಲಕ ಶ್ರೀ ಡಿ. ದೇವರಾಜ ಅರಸ್ ಅವರು, ‘ಇದರ ಬಗ್ಗೆ ನಗುವುದೊಂದನ್ನು ಬಿಟ್ಟರೆ ಬೇರೆ ಯಾವ ಪ್ರತಿಕ್ರಿಯೆಯೂ ಇಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇತರ ಪಕ್ಷಗಳ ಜತೆ ಮೈತ್ರಿ: ಸಾಧ್ಯತೆ ತಳ್ಳಿಹಾಕಲಾಗದು– ಎಸ್ಸೆನ್</strong></p>.<p>ಗಾಂಧಿನಗರ, ಡಿ. 19– ತಮ್ಮ ಪಕ್ಷ ಹಾಗೂ ಇತರ ಪಕ್ಷಗಳ ನಡುವೆ ಮೈತ್ರಿ ಅಥವಾ ಚುನಾವಣಾ ಹೊಂದಾಣಿಕೆ ಮಾಡಿಕೊಳ್ಳುವುದನ್ನು ತಳ್ಳಿಹಾಕುವುದಕ್ಕೆ ಆಗುವು ದಿಲ್ಲವೆಂದು ವಿರೋಧಿ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್. ನಿಜಲಿಂಗಪ್ಪನವರು ಹೇಳಿದರು.</p>.<p>ಪಕ್ಷದ ಪೂರ್ಣಾಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಆಗಮಿಸಿದ ಶ್ರೀ ಎಸ್. ನಿಜಲಿಂಗಪ್ಪ ಅವರು ಪತ್ರಕರ್ತರ ಜತೆ ಮಾತನಾಡುತ್ತಿದ್ದಾಗ, ಕಾಂಗ್ರೆಸ್ ಪಕ್ಷದಲ್ಲಿ ಒಡಕು ಉಂಟಾಗಿರುವುದರಿಂದ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿಯೂ ‘ಒಂಟಿಯಾಗಿಯೇ’ ಹೋಗುವ ತತ್ವವನ್ನು ನೀವು ಇನ್ನೂ ಒತ್ತಿ ಹೇಳುತ್ತೀರಾ ಎಂದು ಪ್ರಶ್ನಿಸಲಾಯಿತು.</p>.<p>ಈ ವಿಷಯವನ್ನು ತಾವು ಇನ್ನೂ ತೀವ್ರವಾಗಿ ಆಲೋಚಿಸಬೇಕಾಗಿದೆ ಯೆಂದೂ, ಸಜೀವ ಸಂಸ್ಥೆ ಬಲಗೊಳ್ಳುವಂತೆ ಮಾಡಬೇಕಾಗಿದೆಯೆಂದೂ, ಅಧಿಕ ಸಂಖ್ಯೆಯಲ್ಲಿ ಜನರು ತಮ್ಮ ಜತೆ ಸೇರುವರೆಂದು ತಾವು ನಿರೀಕ್ಷಿಸುವುದಾ ಗಿಯೂ ಅವರು ತಿಳಿಸಿದರು.</p>.<p><strong>ನಗೆಯೊಂದೇ ಪ್ರತಿಕ್ರಿಯೆ</strong></p>.<p>ಬೆಂಗಳೂರು, ಡಿ. 19– ತಮ್ಮನ್ನು ಶ್ರೀ ನಿಜಲಿಂಗಪ್ಪ ಅವರು ಕಾಂಗ್ರೆಸ್ಸಿನಿಂದ ವಜಾ ಮಾಡಿರುವುದನ್ನು ವರದಿಗಾರರು ಪ್ರಸ್ತಾಪಿಸಿದಾಗ ಪ್ರಧಾನಿ ಕಾಂಗ್ರೆಸ್ಸಿನ ರಾಜ್ಯ ಅಡ್ಹಾಕ್ ಸಮಿತಿಯ ಸಂಚಾಲಕ ಶ್ರೀ ಡಿ. ದೇವರಾಜ ಅರಸ್ ಅವರು, ‘ಇದರ ಬಗ್ಗೆ ನಗುವುದೊಂದನ್ನು ಬಿಟ್ಟರೆ ಬೇರೆ ಯಾವ ಪ್ರತಿಕ್ರಿಯೆಯೂ ಇಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>