ಖಾಸಗಿಯವರಿಗೆ ಮಂಡ್ಯ ಕಾಗದ ಕಾರ್ಖಾನೆ: ಪರಿಶೀಲನೆಯಲ್ಲಿ
ಬೆಂಗಳೂರು, ಮಾರ್ಚ್ 9: ಆರಂಭವಾದ ಅಂದಿನಿಂದ ನಷ್ಟದಲ್ಲಿ ನಡೆಯುತ್ತಿರುವ ಮಂಡ್ಯ ನ್ಯಾಷನಲ್ ಕಾಗದ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಡುವ ವಿಚಾರವನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಕೈಗಾರಿಕಾ ಸಚಿವ ಎಂ. ರಾಜಶೇಖರ ಮೂರ್ತಿ ಅವರು ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.