<p><strong>ರಾಜ್ಯ ಸರ್ಕಾರಿ ನೌಕರರ ಕನಿಷ್ಠ ನಿವೃತ್ತಿ ವೇತನ 40 ರೂ.<br />ಬೆಂಗಳೂರು, ಮಾರ್ಚ್ 13–</strong> ರಾಜ್ಯದ ಸರ್ಕಾರಿ ನೌಕರರ ಕನಿಷ್ಠ ನಿವೃತ್ತಿ ವೇತನವನ್ನು ಈಗ ಇರುವ 30 ರೂ.<br />ನಿಂದ 40 ರೂ.ಗೆ ಹೆಚ್ಚಿಸಲು ತಾವು ನಿರ್ಧರಿಸಿರುವುದಾಗಿ ಅರ್ಥ ಸಚಿವ ಶ್ರೀರಾಮಕೃಷ್ಣ ಹೆಗಡೆ ಅವರು ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.</p>.<p><strong>ಕಾವೇರಿ ಬಯಲಿನ ನೀರಾವರಿ ಯೋಜನೆ ಕಾರ್ಯ ನಿಲ್ಲದು: ವೀರೇಂದ್ರ ಪಾಟೀಲ್ ಸ್ಪಷ್ಟನೆ<br />ಬೆಂಗಳೂರು ಮಾರ್ಚ್ 13–</strong> ಕೇಂದ್ರದ ನೆರವು ಬಂದರೂ ಸರಿಯೇ, ಬರದಿದ್ದರೂ ಸರಿಯೇ ಕಾವೇರಿ ಬಯಲಿನಲ್ಲಿ ಆರಂಭ ವಾಗಿರುವ ನೀರಾವರಿ ಯೋಜನೆಗಳನ್ನು ಯಾವ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ವಿಧಾನಸಭೆಯಲ್ಲಿ ಮತ್ತೆ ಸ್ಪಷ್ಟಪಡಿಸಿದರು.</p>.<p><strong>ಧಾರವಾಡ, ಬಿದರೆ ಜಿಲ್ಲೆಗಳ ಆದ್ಯಂತ ವ್ಯವಹಾರ ಬಂದ್<br />ಧಾರವಾಡ/ ಬಿದರೆ, ಮಾರ್ಚ್ 13– </strong>ಮೈಸೂರು– ಮಹಾರಾಷ್ಟ್ರ ಗಡಿಪ್ರಶ್ನೆ ಕುರಿತು ಪ್ರಧಾನಮಂತ್ರಿ ಸೂಚಿಸಿರುವ ಇತ್ತೀಚಿನ ಸಲಹೆಗಳಿಗೆ ಪ್ರತಿಭಟನೆ ವ್ಯಕ್ತಪಡಿಸಲು ಇಡೀ ಧಾರಾವಾಡ ಜಿಲ್ಲೆ ಹಾಗೂ ಬಿದರೆ ಜಿಲ್ಲೆಗಳು ಇಂದು ಆಚರಿಸಿದ ಬಂದ್ ಸಂಪೂರ್ಣ ಯಶಸ್ವಿ ಆಗಿತ್ತು. ಎರಡೂ ಜಿಲ್ಲೆಗಳ ಎಲ್ಲ ಪಟ್ಟಣಗಳಲ್ಲೂ ಎಲ್ಲ ವ್ಯವಹಾರವೂ ಸ್ಥಗಿತ ಆಗಿತ್ತು.</p>.<p>ಮೈಸೂರು ಹಾಗೂ ಬಿಜಾಪುರ ನಗರಗಳೂ ಶಾಂತಿಯುತ ಬಂದ್ ಆಚರಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯ ಸರ್ಕಾರಿ ನೌಕರರ ಕನಿಷ್ಠ ನಿವೃತ್ತಿ ವೇತನ 40 ರೂ.<br />ಬೆಂಗಳೂರು, ಮಾರ್ಚ್ 13–</strong> ರಾಜ್ಯದ ಸರ್ಕಾರಿ ನೌಕರರ ಕನಿಷ್ಠ ನಿವೃತ್ತಿ ವೇತನವನ್ನು ಈಗ ಇರುವ 30 ರೂ.<br />ನಿಂದ 40 ರೂ.ಗೆ ಹೆಚ್ಚಿಸಲು ತಾವು ನಿರ್ಧರಿಸಿರುವುದಾಗಿ ಅರ್ಥ ಸಚಿವ ಶ್ರೀರಾಮಕೃಷ್ಣ ಹೆಗಡೆ ಅವರು ಇಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.</p>.<p><strong>ಕಾವೇರಿ ಬಯಲಿನ ನೀರಾವರಿ ಯೋಜನೆ ಕಾರ್ಯ ನಿಲ್ಲದು: ವೀರೇಂದ್ರ ಪಾಟೀಲ್ ಸ್ಪಷ್ಟನೆ<br />ಬೆಂಗಳೂರು ಮಾರ್ಚ್ 13–</strong> ಕೇಂದ್ರದ ನೆರವು ಬಂದರೂ ಸರಿಯೇ, ಬರದಿದ್ದರೂ ಸರಿಯೇ ಕಾವೇರಿ ಬಯಲಿನಲ್ಲಿ ಆರಂಭ ವಾಗಿರುವ ನೀರಾವರಿ ಯೋಜನೆಗಳನ್ನು ಯಾವ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ವಿಧಾನಸಭೆಯಲ್ಲಿ ಮತ್ತೆ ಸ್ಪಷ್ಟಪಡಿಸಿದರು.</p>.<p><strong>ಧಾರವಾಡ, ಬಿದರೆ ಜಿಲ್ಲೆಗಳ ಆದ್ಯಂತ ವ್ಯವಹಾರ ಬಂದ್<br />ಧಾರವಾಡ/ ಬಿದರೆ, ಮಾರ್ಚ್ 13– </strong>ಮೈಸೂರು– ಮಹಾರಾಷ್ಟ್ರ ಗಡಿಪ್ರಶ್ನೆ ಕುರಿತು ಪ್ರಧಾನಮಂತ್ರಿ ಸೂಚಿಸಿರುವ ಇತ್ತೀಚಿನ ಸಲಹೆಗಳಿಗೆ ಪ್ರತಿಭಟನೆ ವ್ಯಕ್ತಪಡಿಸಲು ಇಡೀ ಧಾರಾವಾಡ ಜಿಲ್ಲೆ ಹಾಗೂ ಬಿದರೆ ಜಿಲ್ಲೆಗಳು ಇಂದು ಆಚರಿಸಿದ ಬಂದ್ ಸಂಪೂರ್ಣ ಯಶಸ್ವಿ ಆಗಿತ್ತು. ಎರಡೂ ಜಿಲ್ಲೆಗಳ ಎಲ್ಲ ಪಟ್ಟಣಗಳಲ್ಲೂ ಎಲ್ಲ ವ್ಯವಹಾರವೂ ಸ್ಥಗಿತ ಆಗಿತ್ತು.</p>.<p>ಮೈಸೂರು ಹಾಗೂ ಬಿಜಾಪುರ ನಗರಗಳೂ ಶಾಂತಿಯುತ ಬಂದ್ ಆಚರಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>