ಬೆಂಗಳೂರು, ಏ. 15– ರಾಜ್ಯದ ಆಡಳಿತ ಕಾಂಗ್ರೆಸ್ ಹಾಗೂ ಕೆಲ ಇತರ ಪಕ್ಷಗಳ ಸುಮಾರು 40 ಮಂದಿ ಶಾಸಕರ ಮನವಿಯೊಂದನ್ನು ದೆಹಲಿಯಲ್ಲಿ ರಾಷ್ಟ್ರಪತಿ ಹಾಗೂ ಪ್ರಧಾನಿ ಅವರುಗಳಿಗೆ ಅರ್ಪಿಸಿ ಅದರಲ್ಲಿ ರಾಜ್ಯದ ಮಂತ್ರಿಮಂಡಲದ ವಿರುದ್ಧ ನಮೂದಿಸಿರುವ ಆರು ಆಪಾದನೆಗಳ ಬಗ್ಗೆ ನ್ಯಾಯಾಂಗಾಧಿಕಾರಿಯಿಂದ ವಿಚಾರಣೆ ನಡೆಸಬೇಕೆಂದು ಒತ್ತಾಯ ಮಾಡಲಾಗಿದೆಯೆಂದು ತಿಳಿದುಬಂದಿದೆ.