ಕಾಳಿನದಿ ಯೋಜನೆಗೆ ಕೂಡಲೇ ಒಪ್ಪಿಗೆಗೆ ಕೇಂದ್ರಕ್ಕೆ ಒತ್ತಾಯ
ಜೋಗ್, ಜೂನ್ 2– ರಾಜ್ಯದಲ್ಲಿ ಭಾರಿ ಉದ್ದಿಮೆಗಳು ಮತ್ತು ಕೃಷಿರಂಗದಿಂದ ವಿದ್ಯುತ್ ಬೇಡಿಕೆ ಹೆಚ್ಚುತ್ತಿರುವುದರಿಂದ ಕೇಂದ್ರ ಸರ್ಕಾರ ವಿಳಂಬವಿಲ್ಲದೆ ಕಾಳಿನದಿ ಯೋಜನೆಗೆ ಒಪ್ಪಿಗೆ ನೀಡಬೇಕೆಂದು ರಾಜ್ಯಪಾಲ ಶ್ರೀ ಧರ್ಮವೀರ ಮತ್ತು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಇಂದು ಇಲ್ಲಿ ಒತ್ತಾಯಪಡಿಸಿದರು.