ನವದೆಹಲಿ, ಆ. 18– ರಾಷ್ಟ್ರಪತಿ ಚುನಾವಣೆಯಲ್ಲಿ ಅಧಿಕೃತ ಅಭ್ಯರ್ಥಿಗೆ ವಿರೋಧ ವ್ಯಕ್ತಪಡಿಸಿದ ಬಗ್ಗೆ ವಿವರಣೆ ನೀಡಬೇಕೆಂದು ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರನ್ನು, ಅವರ ಇಬ್ಬರು ಹಿರಿಯ ಸಹೋದ್ಯೋಗಿ ಗಳಾದ ಶ್ರೀ ಫಕ್ರುದ್ದೀನ್ ಆಲಿ ಅಹ್ಮದ್ ಹಾಗೂ ಶ್ರೀ ಜಗಜೀವನರಾಮ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಸ್. ನಿಜಲಿಂಗಪ್ಪನವರು ಕೇಳಿರುವುದರಿಂದ ಕಾಂಗ್ರೆಸ್ಸಿನಲ್ಲಿನ ಬಿಕ್ಕಟ್ಟು ಇಂದು ರಾತ್ರಿ ಮತ್ತಷ್ಟು ಉಲ್ಬಣಿಸಿತು.