ಶ್ರೀಲಂಕಾದಲ್ಲಿ ದಾಳಿ ನಡೆದ ನಂತರ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ವಿಮಾನ ನಿಲ್ದಾಣ, ರೈಲು ಹಾಗೂ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಿದ್ದೇವೆ. ಪ್ರಾರ್ಥನಾ ಮಂದಿರಗಳ ಮುಖ್ಯಸ್ಥರು, ಹೋಟೆಲ್ ಹಾಗೂ ಮಾಲ್ಗಳ ಮಾಲೀಕರ ಜತೆ ಸಮಾಲೋಚನೆ ನಡೆಸಿ, ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಿದ್ದೇವೆ. ಆತಂಕವೇ ಬೇಡ, ಬೆಂಗಳೂರು ಸುರಕ್ಷಿತವಾಗಿದೆ.