<p>ಸುಪ್ರೀಂ ಕೋರ್ಟ್ ನೀಡಿದ ಒಳಮೀಸಲಾತಿ ತೀರ್ಪು ಸ್ವಾಗತಾರ್ಹವಾದುದು. ಇದರಿಂದ ನ್ಯಾ. ಸದಾಶಿವ ಆಯೋಗದ ವರದಿಯ ಚರ್ಚೆ ಮುನ್ನೆಲೆಗೆ ಬಂದಿದೆ. ಎಡಗೈ- ಬಲಗೈಗಳಾಗಿ ಒಡೆದಿರುವ ಪರಿಶಿಷ್ಟ ಜಾತಿ ಜನರಿಗೆ ಒಳಮೀಸಲಾತಿಯ ರಾಜಕಾರಣವು ಎಂದಿಗಿಂತ ಇಂದು ಹೆಚ್ಚು ಅರ್ಥವಾದಂತಿದೆ ಮತ್ತು ಒಪ್ಪಿಕೊಳ್ಳಬೇಕಾದ ಅನಿವಾರ್ಯದ ಅರಿವನ್ನೂ ಮೂಡಿಸಿದೆ.</p>.<p>ಪರಿಶಿಷ್ಟ ಜಾತಿ, ಪಂಗಡ ಅಥವಾ ಹಿಂದುಳಿದ ವರ್ಗಗಳು ಅಷ್ಟೇ ಅಲ್ಲ ಪ್ರತಿಯೊಂದು ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿಗೊಳಿಸಬೇಕು. ನೂರಕ್ಕೆ ನೂರರಷ್ಟೂ ಮೀಸಲಾತಿಯನ್ನು ಎಲ್ಲ ಜಾತಿಗಳಲ್ಲಿ ವಿಂಗಡಿಸಬೇಕು. ಆಗ ಸಾಮಾಜಿಕ ನ್ಯಾಯ ದಕ್ಕಿದಂತಾಗುತ್ತದೆ. ಮೀಸಲಾತಿ ಆರಂಭಿಸಿದಾಗ ಪರಿಶಿಷ್ಟ ಜಾತಿಯಲ್ಲಿ ಕೇವಲ 6 ಜಾತಿಗಳಿದ್ದವು. ಈಗ ಆ ಪಟ್ಟಿಯಲ್ಲಿ 101 ಜಾತಿಗಳಿವೆ. ಜಾತಿಗಳು ಹಾಗೂ ಜನರು ಹೆಚ್ಚಾದಷ್ಟು ಮೀಸಲಾತಿ ಪ್ರಮಾಣ ಹೆಚ್ಚಾಗಬೇಕಲ್ಲವೇ?</p>.<p>ಸರ್ಕಾರಿ ವಲಯದಲ್ಲಿ ಇದ್ದಂತೆ ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೊಳಿಸುವ ಅಗತ್ಯ ಇದೆ. ಭೂಮಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಸರ್ಕಾರದಿಂದ ಪಡೆಯುತ್ತಿರುವ ಕಂಪನಿಗಳು ಇದನ್ನು ಜಾರಿಗೊಳಿಸುವುದರಲ್ಲಿ ತಪ್ಪೇನಿಲ್ಲ.</p>.<p><strong>– ಅನಸೂಯ ಕಾಂಬಳೆ, ಸಹಾಯಕ ಪ್ರಾಧ್ಯಾಪಕಿ, ಡಾ.ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಪ್ರೀಂ ಕೋರ್ಟ್ ನೀಡಿದ ಒಳಮೀಸಲಾತಿ ತೀರ್ಪು ಸ್ವಾಗತಾರ್ಹವಾದುದು. ಇದರಿಂದ ನ್ಯಾ. ಸದಾಶಿವ ಆಯೋಗದ ವರದಿಯ ಚರ್ಚೆ ಮುನ್ನೆಲೆಗೆ ಬಂದಿದೆ. ಎಡಗೈ- ಬಲಗೈಗಳಾಗಿ ಒಡೆದಿರುವ ಪರಿಶಿಷ್ಟ ಜಾತಿ ಜನರಿಗೆ ಒಳಮೀಸಲಾತಿಯ ರಾಜಕಾರಣವು ಎಂದಿಗಿಂತ ಇಂದು ಹೆಚ್ಚು ಅರ್ಥವಾದಂತಿದೆ ಮತ್ತು ಒಪ್ಪಿಕೊಳ್ಳಬೇಕಾದ ಅನಿವಾರ್ಯದ ಅರಿವನ್ನೂ ಮೂಡಿಸಿದೆ.</p>.<p>ಪರಿಶಿಷ್ಟ ಜಾತಿ, ಪಂಗಡ ಅಥವಾ ಹಿಂದುಳಿದ ವರ್ಗಗಳು ಅಷ್ಟೇ ಅಲ್ಲ ಪ್ರತಿಯೊಂದು ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿಗೊಳಿಸಬೇಕು. ನೂರಕ್ಕೆ ನೂರರಷ್ಟೂ ಮೀಸಲಾತಿಯನ್ನು ಎಲ್ಲ ಜಾತಿಗಳಲ್ಲಿ ವಿಂಗಡಿಸಬೇಕು. ಆಗ ಸಾಮಾಜಿಕ ನ್ಯಾಯ ದಕ್ಕಿದಂತಾಗುತ್ತದೆ. ಮೀಸಲಾತಿ ಆರಂಭಿಸಿದಾಗ ಪರಿಶಿಷ್ಟ ಜಾತಿಯಲ್ಲಿ ಕೇವಲ 6 ಜಾತಿಗಳಿದ್ದವು. ಈಗ ಆ ಪಟ್ಟಿಯಲ್ಲಿ 101 ಜಾತಿಗಳಿವೆ. ಜಾತಿಗಳು ಹಾಗೂ ಜನರು ಹೆಚ್ಚಾದಷ್ಟು ಮೀಸಲಾತಿ ಪ್ರಮಾಣ ಹೆಚ್ಚಾಗಬೇಕಲ್ಲವೇ?</p>.<p>ಸರ್ಕಾರಿ ವಲಯದಲ್ಲಿ ಇದ್ದಂತೆ ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೊಳಿಸುವ ಅಗತ್ಯ ಇದೆ. ಭೂಮಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಸರ್ಕಾರದಿಂದ ಪಡೆಯುತ್ತಿರುವ ಕಂಪನಿಗಳು ಇದನ್ನು ಜಾರಿಗೊಳಿಸುವುದರಲ್ಲಿ ತಪ್ಪೇನಿಲ್ಲ.</p>.<p><strong>– ಅನಸೂಯ ಕಾಂಬಳೆ, ಸಹಾಯಕ ಪ್ರಾಧ್ಯಾಪಕಿ, ಡಾ.ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>