ಪ್ರಸಕ್ತ ಸಾಲಿನಲ್ಲಿ ಕೆರೆ ತುಂಬಿಸುವ ಮತ್ತು ನೀರಾವರಿ ಸೌಲಭ್ಯ ಒದಗಿಸುವ ಒಟ್ಟು ₹ 4,134 ಕೋಟಿ ಮೊತ್ತದ 11 ಯೋಜನೆಗಳಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಭದ್ರಾ ಉಪ ಜಲಾನಯನ ಪ್ರದೇಶದಿಂದ ಏತ ನೀರಾವರಿ ಮೂಲಕ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ 31, ಕಡೂರು ತಾಲ್ಲೂಕಿನ 116, ಚಿಕ್ಕಮಗಳೂರು ತಾಲ್ಲೂಕಿನ 48 ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ 4 ಸೇರಿ ಒಟ್ಟು 197 ಕೆರೆಗಳನ್ನು₹ 1,281.80 ಕೋಟಿ ವೆಚ್ಚದಲ್ಲಿ ತುಂಬಿಸಲು ಯೋಜಿಸಲಾಗಿದೆ.