ತುಮಕೂರು ಜಿಲ್ಲೆಯಲ್ಲಿ ಎಪಿಎಂಸಿಗಳು ನೇರವಾಗಿ ಗೋದಾಮು, ಶೀತಲ ಘಟಕಗಳನ್ನು ನಿರ್ವಹಣೆ ಮಾಡುತ್ತಿಲ್ಲ. ತಿಪಟೂರು ಎಪಿಎಂಸಿಯಲ್ಲಿ ಕೊಬ್ಬರಿ ವರ್ತಕರೇ ಗ್ರೇಡಿಂಗ್, ಪ್ಯಾಕಿಂಗ್ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಬೀದರ್ ಹೊರತುಪಡಿಸಿ ಉಳಿದ ಕಡೆ ಶೈತ್ಯಾಗಾರಗಳು ಇಲ್ಲ.ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗದಲ್ಲಿ ಶೇ 50ರಷ್ಟು ಸಿಬ್ಬಂದಿ ಕಡಿತ ಮಾಡಲಾಗಿದೆ.