15 ಗ್ರಾಮ ಮುಳುಗಡೆ: ಜಲಾಶಯ ನಿರ್ಮಾಣವಾಗುವುದರಿಂದ ಗುಡೂದೂರು, ಮಲ್ಲಾಪುರ, ಕರಡೋಣಿ, ಈಚನಾಳ, ಬುನ್ನಟ್ಟಿ, ಯತ್ನಟ್ಟಿ, ಗೊಲ್ಲರಹಟ್ಟಿ, ಪುರ, ಬುಕನಟ್ಟಿ, ಉಮಲೋಟಿ, ನೀರಲೂಟಿ, ಕಾಟಾಪುರ, ಮಲ್ಲಿಗೆವಾಡ, ಚಿಕ್ಕಖೇಡ, ಹಿರೇಖೇಡ ಸೇರಿದಂತೆ15 ಗ್ರಾಮಗಳು ಮುಳುಗಡೆಯಾಗಲಿವೆ ಎಂದು ಅಂದಾಜಿಸಲಾಗಿದೆ. ವಿಸ್ತೃತ ಯೋಜನಾ ವರದಿಯ ನಂತರ ಗ್ರಾಮಗಳ ಮುಳುಗಡೆ ಬಗ್ಗೆ ಖಚಿತ ಮಾಹಿತಿ ದೊರೆಯಲಿದೆ.