ವಿದ್ಯುತ್ ಯೋಜನೆ ವಿಳಂಬ– ಕೇಂದ್ರ ಕಾರಣ
ಬೆಂಗಳೂರು, ಜೂನ್ 14– ರಾಜ್ಯದ ಹಲವಾರು ವಿದ್ಯುತ್ ಯೋಜನೆಗಳು ಕಾರ್ಯರೂಪಕ್ಕೆ ಬಾರದೆ ತಡವಾಗಿರುವುದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಉಪ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ನೇರವಾಗಿ ಆರೋಪಿಸಿದರು. ರಾಜ್ಯದಲ್ಲಿ ವಿದ್ಯುತ್ ಯೋಜನೆಗಳು ಅನುಷ್ಠಾನಗೊಳ್ಳದೆ ತಡವಾಗಿರುವ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಅವರು, ಕೇಂದ್ರ ಸರ್ಕಾರ ಈ ಅಪವಾದ ಹೊರಬೇಕಾಗಿದೆ ಎಂದರು.