<p><strong>ಚುನಾವಣೆ ಮುಂದೂಡಿಕೆಗೆ ಪ್ರತಿಪಕ್ಷದ ಉಗ್ರ ಟೀಕೆ</strong><br /><strong>ಬೆಂಗಳೂರು, ಮೇ 2–</strong> ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕರು ಇಂದು ಇಲ್ಲಿ ಕಟುವಾಗಿ ಟೀಕಿಸಿದರು. ಕಳೆದ ನಾಲ್ಕು ವರ್ಷಗಳ ನಿಷ್ಕ್ರಿಯ ಆಡಳಿತದ ಫಲವಾಗಿ ಕಾಡುತ್ತಿರುವ ಭೀಕರ ಸೋಲಿನ ಭಯದಿಂದ, ಜನರನ್ನು ಎದುರಿಸಲು ಹೆದರಿ ಸರ್ಕಾರ ಹೇಡಿತನ ಪ್ರದರ್ಶಿಸಿದೆ ಎಂದು ಅವರೆಲ್ಲರ ಒಕ್ಕೊರಲಿನ ಆರೋಪ.</p>.<p>ಚುನಾವಣೆಯ ದಿನಾಂಕ ಘೋಷಣೆ– ಮುಂದೂಡಿಕೆ– ಮತ್ತೊಂದು ದಿನಾಂಕ ಪ್ರಕಟಣೆ– ಚಿನ್ನಪ್ಪ ರೆಡ್ಡಿ ವರದಿ ಜಾರಿ– ತಡೆಯಾಜ್ಞೆ ತರಲು ಹೂಡಿದ ತಂತ್ರ– ಸುಗ್ರೀವಾಜ್ಞೆ ಮೂಲಕ ಅನಿರ್ದಿಷ್ಟ ಕಾಲ ಚುನಾವಣೆ ಮುಂದೂಡಿಕೆ– ಹೀಗೆ ಈ ಘಟನೆಗಳ ಸರಣಿ ಸರ್ಕಾರ ಜನರೊಡನೆ ಕಣ್ಣಾಮುಚ್ಚಾಲೆಯಾಡಿ ಅವರನ್ನು ಮೋಸಗೊಳಿಸಿದೆ ಎಂಬುದಕ್ಕೆ ಸಾಕ್ಷಿ ಎಂದು ವಿರೋಧಿ ನಾಯಕರು ಹೇಳಿದ್ದಾರೆ.</p>.<p><strong>ರೋರಿಕ್ ದಂಪತಿಗಳ ರೂ. 20 ಕೋಟಿ ಆಸ್ತಿ ಲೂಟಿ</strong><br /><strong>ಬೆಂಗಳೂರು, ಮೇ 2–</strong> ವಿಶ್ವವಿಖ್ಯಾತ ಕಲಾವಿದ ರೋರಿಕ್ ಹಾಗೂ ಭಾರತ ಚಲನಚಿತ್ರ ರಂಗದ ಮಿನುಗು ತಾರೆ ದೇವಿಕಾ ರಾಣಿ ಅವರ ತಾತಗುಣಿ ಎಸ್ಟೇಟ್ನಲ್ಲಿದ್ದ ಸುಮಾರು 20 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಮೂಲ್ಯ ಕಲಾಕೃತಿಗಳು, ವಜ್ರ, ಬಂಗಾರ, ಬೆಳ್ಳಿ ಆಭರಣಗಳು ಕಣ್ಮರೆಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚುನಾವಣೆ ಮುಂದೂಡಿಕೆಗೆ ಪ್ರತಿಪಕ್ಷದ ಉಗ್ರ ಟೀಕೆ</strong><br /><strong>ಬೆಂಗಳೂರು, ಮೇ 2–</strong> ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷದ ನಾಯಕರು ಇಂದು ಇಲ್ಲಿ ಕಟುವಾಗಿ ಟೀಕಿಸಿದರು. ಕಳೆದ ನಾಲ್ಕು ವರ್ಷಗಳ ನಿಷ್ಕ್ರಿಯ ಆಡಳಿತದ ಫಲವಾಗಿ ಕಾಡುತ್ತಿರುವ ಭೀಕರ ಸೋಲಿನ ಭಯದಿಂದ, ಜನರನ್ನು ಎದುರಿಸಲು ಹೆದರಿ ಸರ್ಕಾರ ಹೇಡಿತನ ಪ್ರದರ್ಶಿಸಿದೆ ಎಂದು ಅವರೆಲ್ಲರ ಒಕ್ಕೊರಲಿನ ಆರೋಪ.</p>.<p>ಚುನಾವಣೆಯ ದಿನಾಂಕ ಘೋಷಣೆ– ಮುಂದೂಡಿಕೆ– ಮತ್ತೊಂದು ದಿನಾಂಕ ಪ್ರಕಟಣೆ– ಚಿನ್ನಪ್ಪ ರೆಡ್ಡಿ ವರದಿ ಜಾರಿ– ತಡೆಯಾಜ್ಞೆ ತರಲು ಹೂಡಿದ ತಂತ್ರ– ಸುಗ್ರೀವಾಜ್ಞೆ ಮೂಲಕ ಅನಿರ್ದಿಷ್ಟ ಕಾಲ ಚುನಾವಣೆ ಮುಂದೂಡಿಕೆ– ಹೀಗೆ ಈ ಘಟನೆಗಳ ಸರಣಿ ಸರ್ಕಾರ ಜನರೊಡನೆ ಕಣ್ಣಾಮುಚ್ಚಾಲೆಯಾಡಿ ಅವರನ್ನು ಮೋಸಗೊಳಿಸಿದೆ ಎಂಬುದಕ್ಕೆ ಸಾಕ್ಷಿ ಎಂದು ವಿರೋಧಿ ನಾಯಕರು ಹೇಳಿದ್ದಾರೆ.</p>.<p><strong>ರೋರಿಕ್ ದಂಪತಿಗಳ ರೂ. 20 ಕೋಟಿ ಆಸ್ತಿ ಲೂಟಿ</strong><br /><strong>ಬೆಂಗಳೂರು, ಮೇ 2–</strong> ವಿಶ್ವವಿಖ್ಯಾತ ಕಲಾವಿದ ರೋರಿಕ್ ಹಾಗೂ ಭಾರತ ಚಲನಚಿತ್ರ ರಂಗದ ಮಿನುಗು ತಾರೆ ದೇವಿಕಾ ರಾಣಿ ಅವರ ತಾತಗುಣಿ ಎಸ್ಟೇಟ್ನಲ್ಲಿದ್ದ ಸುಮಾರು 20 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಮೂಲ್ಯ ಕಲಾಕೃತಿಗಳು, ವಜ್ರ, ಬಂಗಾರ, ಬೆಳ್ಳಿ ಆಭರಣಗಳು ಕಣ್ಮರೆಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>