ಸೋಮವಾರ ಬೆಳಿಗ್ಗೆ 6 ಗಂಟೆಗೆ ನಗರದ ಜಿಲ್ಲಾ ಖಜಾನೆಯಲ್ಲಿರುವ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣ ಪೆಟ್ಟೆಗೆಗೆ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಪೂಜೆ ಸಲ್ಲಿಸಿ ವೈರಮುಡಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಲಕ್ಷ್ಮಿ ಜನಾರ್ದನ ದೇವಾಲಯದಲ್ಲಿ ವೈರಮುಡಿ ಪೆಟ್ಟಿಗೆ ಇಟ್ಟು ಪೂಜೆ ಸಲ್ಲಿಸಿದ ನಂತರ ಮೇಲುಕೋಟೆ ಮಾರ್ಗ ಮಧ್ಯೆ 80ಕ್ಕೂ ಹೆಚ್ಚು ಹಳ್ಳಿಗಳ ಜನರು ಪೂಜೆ ಸಲ್ಲಿಸಲಿದ್ದಾರೆ.