‘ಈ ಅಧಿಕಾರಿಗಳು ವಿಧಾನಮಂಡಲ ಗ್ರಂಥಾಲಯವನ್ನು ಇ– ಗ್ರಂಥಾಲಯವನ್ನಾಗಿ ಮಾರ್ಪಡಿಸುವ ಕಾರ್ಯದಲ್ಲಿ ಆಸಕ್ತಿ ತೆಗೆದುಕೊಂಡಿಲ್ಲ. ಮುಖ್ಯ ಗ್ರಂಥಪಾಲಕರು ಹಾಗೂ ಗ್ರಂಥಾಲಯ ಶಾಖೆ ಮೇಲುಸ್ತುವಾರಿ ಹೊತ್ತಿದ್ದ ಅಧಿಕಾರಿಗಳು ತಮ್ಮ ಶಾಖೆಗಳ ನಿರ್ವಹಣೆಗೆ ಪ್ರಗತಿ ಪರಿಶೀಲನೆ ನಡೆಸಿಲ್ಲ. ಅಲ್ಲದೆ, ಇ– ಉನ್ನತೀಕರಣ ವಿಷಯದ ಬಗ್ಗೆ ಅಧಿಕಾರಿ ಮತ್ತು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಿಸ್ಟಂ ಮ್ಯಾನೇಜರ್ ವರದಿ ನೀಡಿದ್ದಾರೆ. ಇದನ್ನು ಗಂಭೀರ ಕರ್ತವ್ಯ ಲೋಪ ಎಂದು ಪರಿಗಣಿಸಲಾಗಿದೆ. ಈ ಸಂಬಂಧ ಸತ್ಯಾಸತ್ಯತೆ ಕಂಡುಕೊಳ್ಳಲು ಇಲಾಖೆ ವಿಚಾರಣೆ ನಡೆಸಲು ವಿಚಾರಣಾಧಿಕಾರಿ ನೇಮಿಸಲಾಗಿದೆ ಎಂದು ಆದೇಶ ತಿಳಿಸಿದೆ.