ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ 104 ಕೃಷಿಕರು ಕಣ್ಮರೆ!

Last Updated 5 ಫೆಬ್ರುವರಿ 2013, 19:59 IST
ಅಕ್ಷರ ಗಾತ್ರ

ಇವತ್ತಿನ ರೈತರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ರೈತರ ಹಿತ ಕಾಯುವುದರಲ್ಲಿ ಅಧಿಕಾರ ವರ್ಗ ಹಾಗೂ ಶಾಸಕಾಂಗ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ 2012ರಲ್ಲಿ ಒಟ್ಟು 104 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2012ರ (ಜನವರಿ-ಡಿಸೆಂಬರ್)  ಅಂಕಿ ಅಂಶಗಳನ್ನು ಅವಲೋಕಿಸಿದಾಗ ಕೆಲ ಅಂಶಗಳು ಅಚ್ಚರಿ ಮೂಡಿಸಿದವು. ಅವುಗಳಲ್ಲಿ ಬೀದರ್ ಜಿಲ್ಲೆಯಲ್ಲಿ 14 ಕೃಷಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನದಲ್ಲಿ 11 ಮತ್ತು ಉಳಿದ ಜಿಲ್ಲೆಗಳಾದ ಹಾವೇರಿ, ಚಿತ್ರದುರ್ಗ ಹಾಗು ವಿಜಾಪುರ ಜಿಲ್ಲೆಗಳಲ್ಲಿ ತಲಾ 10 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಸರ್ಕಾರ ಮತ್ತು ಅಧಿಕಾರ ವರ್ಗದವರು ಸೂಕ್ತ ಯೋಜನೆಗಳನ್ನು ಈಗಲೇ ರೂಪಿಸಿ ರೈತರ ಆತ್ಮಹತ್ಯೆಗಳನ್ನು ನಿಲ್ಲಿಸಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT