ರೈತರು ಸಹ ತಮ್ಮ ಸಾಂಪ್ರದಾಯಿಕ ಕೃಷಿಗೆ ತಿಲಾಂಜಲಿ ನೀಡಿ, ಬದಲಾದ ಪರಿಸ್ಥಿತಿ, ಹವಾಮಾನ, ಮಣ್ಣಿನ ಗುಣಕ್ಕೆ ಅನುಗುಣವಾಗಿ ಕಡಿಮೆ ನೀರಿನಲ್ಲಿ ಉತ್ತಮ ಇಳುವರಿ ನೀಡುವ ಬೆಳೆಗಳನ್ನು ಬೆಳೆಯುವುದು ಒಳಿತು. ಕೃಷಿ ವಿಜ್ಞಾನಿಗಳು ತಮ್ಮ ಹವಾನಿಯಂತ್ರಿತ ಕೊಠಡಿಗಳಿಂದ ಹೊರಬಂದು ರೈತರೊಂದಿಗೆ ಸಮಾಲೋಚಿಸಿ ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಬೆಳೆಯಲು ಅವರನ್ನು ಪ್ರೋತ್ಸಾಹಿಸಬೇಕು.