<p><strong>ಸಚಿವರ ರಾಜೀನಾಮೆ ಹಗರಣ:ಪ್ರತಿಪಕ್ಷಗಳ ಪ್ರತಿಭಟನೆ; ಸಭಾತ್ಯಾಗ</strong></p>.<p><strong>ಬೆಂಗಳೂರು, ಜ. 17–</strong> ಉಪ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸೇರಿದಂತೆ ಎಂಟು ಮಂದಿ ಸಚಿವರ ರಾಜೀನಾಮೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಸಮಾಧಾನಕರ ಉತ್ತರ ನೀಡಲಿಲ್ಲ ಎಂದು ವಿರೋಧ ಪಕ್ಷದವರು ವಿಧಾನ ಸಭೆಯಲ್ಲಿ ಇಂದು ತೀವ್ರವಾಗಿ ಪ್ರತಿಭಟಿಸಿ ಸಭಾತ್ಯಾಗ ಮಾಡಿದರು.</p>.<p>ಎಂಟು ಮಂದಿ ಸಚಿವರ ರಾಜೀನಾಮೆಗಳನ್ನು ಅಂಗೀಕರಿಸಲು ಮುಖ್ಯಮಂತ್ರಿಗಳು ಶಿಫಾರಸು ಮಾಡಿದ್ದರೂ ರಾಜ್ಯಪಾಲರು ಅವನ್ನು ತಕ್ಷಣ ಅಂಗೀಕರಿಸದೆ ಸಂವಿಧಾನ ಬಾಹಿರವಾಗಿ ನಡೆದುಕೊಂಡಿದ್ದಾರೆ ಎಂದು ವಿರೋಧ ಪಕ್ಷಗಳು ಒಕ್ಕೊರಲಿನಿಂದ ಆರೋಪಿಸಿದವು.</p>.<p><strong>ವೀರಪ್ಪನ್ ತಂಡದ ಗುಂಡಿಗೆ ಬಲಿ</strong></p>.<p><strong>ಕೊಳ್ಳೇಗಾಲ, ಜ. 17–</strong> ಕುಖ್ಯಾತ ನರಹಂತಕ ವೀರಪ್ಪನ್ ತಂಡ ಹಠಾತ್ತಾಗಿ ಪೊಲೀಸರ ಮೇಲೆ ನಡೆಸಿದ ದಾಳಿಯಿಂದ ಕರ್ನಾಟಕ ವಿಶೇಷ ಕಾರ್ಯಾಚರಣೆ ತಂಡದ ಒಬ್ಬ ಯೋಧ ಸತ್ತಿದ್ದಾನೆ. ಇತರ ಆರು ಮಂದಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಪಡೆ ಪ್ರತಿಯಾಗಿ ನಡೆಸಿದ ದಾಳಿಗೆ ವೀರಪ್ಪನ್ ತಂಡದ ಒಬ್ಬ ಸತ್ತಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಚಿವರ ರಾಜೀನಾಮೆ ಹಗರಣ:ಪ್ರತಿಪಕ್ಷಗಳ ಪ್ರತಿಭಟನೆ; ಸಭಾತ್ಯಾಗ</strong></p>.<p><strong>ಬೆಂಗಳೂರು, ಜ. 17–</strong> ಉಪ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸೇರಿದಂತೆ ಎಂಟು ಮಂದಿ ಸಚಿವರ ರಾಜೀನಾಮೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಸಮಾಧಾನಕರ ಉತ್ತರ ನೀಡಲಿಲ್ಲ ಎಂದು ವಿರೋಧ ಪಕ್ಷದವರು ವಿಧಾನ ಸಭೆಯಲ್ಲಿ ಇಂದು ತೀವ್ರವಾಗಿ ಪ್ರತಿಭಟಿಸಿ ಸಭಾತ್ಯಾಗ ಮಾಡಿದರು.</p>.<p>ಎಂಟು ಮಂದಿ ಸಚಿವರ ರಾಜೀನಾಮೆಗಳನ್ನು ಅಂಗೀಕರಿಸಲು ಮುಖ್ಯಮಂತ್ರಿಗಳು ಶಿಫಾರಸು ಮಾಡಿದ್ದರೂ ರಾಜ್ಯಪಾಲರು ಅವನ್ನು ತಕ್ಷಣ ಅಂಗೀಕರಿಸದೆ ಸಂವಿಧಾನ ಬಾಹಿರವಾಗಿ ನಡೆದುಕೊಂಡಿದ್ದಾರೆ ಎಂದು ವಿರೋಧ ಪಕ್ಷಗಳು ಒಕ್ಕೊರಲಿನಿಂದ ಆರೋಪಿಸಿದವು.</p>.<p><strong>ವೀರಪ್ಪನ್ ತಂಡದ ಗುಂಡಿಗೆ ಬಲಿ</strong></p>.<p><strong>ಕೊಳ್ಳೇಗಾಲ, ಜ. 17–</strong> ಕುಖ್ಯಾತ ನರಹಂತಕ ವೀರಪ್ಪನ್ ತಂಡ ಹಠಾತ್ತಾಗಿ ಪೊಲೀಸರ ಮೇಲೆ ನಡೆಸಿದ ದಾಳಿಯಿಂದ ಕರ್ನಾಟಕ ವಿಶೇಷ ಕಾರ್ಯಾಚರಣೆ ತಂಡದ ಒಬ್ಬ ಯೋಧ ಸತ್ತಿದ್ದಾನೆ. ಇತರ ಆರು ಮಂದಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಪಡೆ ಪ್ರತಿಯಾಗಿ ನಡೆಸಿದ ದಾಳಿಗೆ ವೀರಪ್ಪನ್ ತಂಡದ ಒಬ್ಬ ಸತ್ತಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>