<p><strong>‘ವೃಥಾ ಖರ್ಚು ಉಳಿಸಲು’ ಸಂಪುಟ ತೀರ್ಮಾನ: ಮಾರ್ಚ್ ಅಂತ್ಯದೊಳಗೆ ಪಂಚಾಯಿತಿ ಚುನಾವಣೆ</strong><br /><strong>ಬೆಂಗಳೂರು, ಜ. 3–</strong> ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಮಾರ್ಚ್ ಅಂತ್ಯದೊಳಗೆ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. ಜನಪ್ರತಿನಿಧಿಗಳಿಗೆ ಹೆಚ್ಚಿನ ಅಧಿಕಾರ ನೀಡಲು ಪಂಚಾಯತ್ ರಾಜ್ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ಅಗತ್ಯ ತಿದ್ದುಪಡಿ ತರಲೂ ಅದು ತೀರ್ಮಾನಿಸಿದೆ.</p>.<p>ಪರಿಶಿಷ್ಟ ಜಾತಿ, ಬುಡಕಟ್ಟು ಹಾಗೂ ಹಿಂದುಳಿದ ವರ್ಗಗಳಿಗೆ ಜನಸಂಖ್ಯೆ ಆಧಾರದ ಮೇಲೆ ಶೇಕಡ 56ರಷ್ಟು ಮೀಸಲು ನೀಡಲೂ ನಿರ್ಧರಿಸಲಾಗಿದೆ. ಸಂಪುಟ ಸಭೆಯ ತೀರ್ಮಾನಗಳನ್ನು ಆ ನಂತರ ವಾರ್ತಾ ಸಚಿವ ಎಂ.ಸಿ. ನಾಣಯ್ಯ ಅವರು ಪತ್ರಕರ್ತರಿಗೆ ವಿವರಿಸಿದರು.</p>.<p><strong>ದಾಖಲೆ ಭಕ್ತರು</strong><br /><strong>ಜಮ್ಮು, ಜ. 3 (ಯುಎನ್ಐ)</strong>– ಇಲ್ಲಿಗೆ ಸಮೀಪದ ವೈಷ್ಣೋದೇವಿ ದೇವಾಲಯಕ್ಕೆ 1994ರಲ್ಲಿ 37 ಲಕ್ಷ ಭಕ್ತರು ಭೇಟಿ ನೀಡಿದ್ದು ಇದೊಂದು ದಾಖಲೆಯಾಗಿದೆ.</p>.<p>1992ರಲ್ಲಿ ಒಟ್ಟು 35 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಜೂನ್ ತಿಂಗಳೊಂದರಲ್ಲಿಯೇ 5.19 ಲಕ್ಷ ಭಕ್ತರು ಬಂದಿದ್ದರೂ ನಂತರ ಹಿಮಪಾತದ ನಡುವೆಯೂ ಭಕ್ತರ ಸಂಖ್ಯೆ ಏರುತ್ತಲೇ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ವೃಥಾ ಖರ್ಚು ಉಳಿಸಲು’ ಸಂಪುಟ ತೀರ್ಮಾನ: ಮಾರ್ಚ್ ಅಂತ್ಯದೊಳಗೆ ಪಂಚಾಯಿತಿ ಚುನಾವಣೆ</strong><br /><strong>ಬೆಂಗಳೂರು, ಜ. 3–</strong> ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಮಾರ್ಚ್ ಅಂತ್ಯದೊಳಗೆ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. ಜನಪ್ರತಿನಿಧಿಗಳಿಗೆ ಹೆಚ್ಚಿನ ಅಧಿಕಾರ ನೀಡಲು ಪಂಚಾಯತ್ ರಾಜ್ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ಅಗತ್ಯ ತಿದ್ದುಪಡಿ ತರಲೂ ಅದು ತೀರ್ಮಾನಿಸಿದೆ.</p>.<p>ಪರಿಶಿಷ್ಟ ಜಾತಿ, ಬುಡಕಟ್ಟು ಹಾಗೂ ಹಿಂದುಳಿದ ವರ್ಗಗಳಿಗೆ ಜನಸಂಖ್ಯೆ ಆಧಾರದ ಮೇಲೆ ಶೇಕಡ 56ರಷ್ಟು ಮೀಸಲು ನೀಡಲೂ ನಿರ್ಧರಿಸಲಾಗಿದೆ. ಸಂಪುಟ ಸಭೆಯ ತೀರ್ಮಾನಗಳನ್ನು ಆ ನಂತರ ವಾರ್ತಾ ಸಚಿವ ಎಂ.ಸಿ. ನಾಣಯ್ಯ ಅವರು ಪತ್ರಕರ್ತರಿಗೆ ವಿವರಿಸಿದರು.</p>.<p><strong>ದಾಖಲೆ ಭಕ್ತರು</strong><br /><strong>ಜಮ್ಮು, ಜ. 3 (ಯುಎನ್ಐ)</strong>– ಇಲ್ಲಿಗೆ ಸಮೀಪದ ವೈಷ್ಣೋದೇವಿ ದೇವಾಲಯಕ್ಕೆ 1994ರಲ್ಲಿ 37 ಲಕ್ಷ ಭಕ್ತರು ಭೇಟಿ ನೀಡಿದ್ದು ಇದೊಂದು ದಾಖಲೆಯಾಗಿದೆ.</p>.<p>1992ರಲ್ಲಿ ಒಟ್ಟು 35 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಜೂನ್ ತಿಂಗಳೊಂದರಲ್ಲಿಯೇ 5.19 ಲಕ್ಷ ಭಕ್ತರು ಬಂದಿದ್ದರೂ ನಂತರ ಹಿಮಪಾತದ ನಡುವೆಯೂ ಭಕ್ತರ ಸಂಖ್ಯೆ ಏರುತ್ತಲೇ ಇತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>