ಮೂವರು ಸಚಿವರ ರಾಜೀನಾಮೆ ಬಿಕ್ಕಟ್ಟಿನಲ್ಲಿ ಪಟೇಲ್ ಸರ್ಕಾರ
ಬೆಂಗಳೂರು, ಜ. 20– ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಸಂಪುಟದ ಮೂವರು ಸಚಿವರು ಇಂದು ರಾಜೀನಾಮೆ ನೀಡಿ, ಮಾಜಿ ಮುಖ್ಯಮಂತ್ರಿ ಹಾಗೂ ಲೋಕಶಕ್ತಿ ಮುಖಂಡ ರಾಮಕೃಷ್ಣ ಹೆಗಡೆ ನೇತೃತ್ವದ ರಾಷ್ಟ್ರೀಯ ನವ ನಿರ್ಮಾಣ ವೇದಿಕೆ ಸೇರಿರುವುದರಿಂದ ಮೂರು ವರ್ಷದ ಜನತಾದಳ ಸರ್ಕಾರ ತೀವ್ರ ಬಿಕ್ಕಟ್ಟಿಗೆ ಸಿಲುಕಿದೆ.