<p><strong>ಸರ್ಕಾರ ಸೇರಲು ಜಯಾ ಮಿತ್ರಪಕ್ಷಗಳ ಒಪ್ಪಿಗೆ<br />ಚೆನ್ನೈ, ಮಾರ್ಚ್ 15 (ಪಿಟಿಐ, ಯುಎನ್ಐ)–</strong> ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾದರೆ, ಅದರಲ್ಲಿ ತಮಿಳುನಾಡಿನ ಎಐಎಡಿಎಂಕೆ, ಪಿಎಂಕೆ ಹಾಗೂ ತಮಿಳಗ ರಾಜೀವ್ ಕಾಂಗ್ರೆಸ್ (ಟಿಆರ್ಸಿ) ಪಕ್ಷಗಳು ಭಾಗವಹಿಸುತ್ತವೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಜಯಲಲಿತಾ ಅವರು ಇಂದು ಇಲ್ಲಿ ಪ್ರಕಟಿಸಿದರು.</p>.<p>ಆದರೆ ಈ ಮುನ್ನ ಜಯಲಲಿತಾ ಮೈತ್ರಿಕೂಟದ ಜನತಾ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ ಅವರನ್ನು ಸರ್ಕಾರಕ್ಕೆ ಸೇರಿಸಿಕೊಳ್ಳಬೇಕೆಂಬ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈಗ ಸ್ವಾಮಿ ಅವರ ನಿಲುವು ಸದ್ಯಕ್ಕೆ ಗೊತ್ತಾಗಿಲ್ಲ. ಜಯಲಲಿತಾ ಅವರು ಸ್ವಾಮಿ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ.</p>.<p><strong>ಪ್ರಧಾನಮಂತ್ರಿಯಾಗಿ ವಾಜಪೇಯಿ ನೇಮಕ<br />ನವದೆಹಲಿ, ಮಾರ್ಚ್ 15–</strong> ಬಿಜೆಪಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೂತನ ಪ್ರಧಾನಮಂತ್ರಿಯನ್ನಾಗಿ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ಇಂದು ರಾತ್ರಿ ನೇಮಕ ಮಾಡಿದರು.</p>.<p>ವಾಜಪೇಯಿ ಅವರು 19ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ಸ್ವೀಕಾರ ಮಾಡಿದ ಹತ್ತು ದಿನಗಳಲ್ಲಿ ಲೋಕಸಭೆಯ ವಿಶ್ವಾಸಮತವನ್ನು ಕೋರುವಂತೆ ರಾಷ್ಟ್ರಪತಿ ಅವರು ವಾಜಪೇಯಿ ಅವರಿಗೆ ಆದೇಶ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರ್ಕಾರ ಸೇರಲು ಜಯಾ ಮಿತ್ರಪಕ್ಷಗಳ ಒಪ್ಪಿಗೆ<br />ಚೆನ್ನೈ, ಮಾರ್ಚ್ 15 (ಪಿಟಿಐ, ಯುಎನ್ಐ)–</strong> ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಚನೆಯಾದರೆ, ಅದರಲ್ಲಿ ತಮಿಳುನಾಡಿನ ಎಐಎಡಿಎಂಕೆ, ಪಿಎಂಕೆ ಹಾಗೂ ತಮಿಳಗ ರಾಜೀವ್ ಕಾಂಗ್ರೆಸ್ (ಟಿಆರ್ಸಿ) ಪಕ್ಷಗಳು ಭಾಗವಹಿಸುತ್ತವೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಜಯಲಲಿತಾ ಅವರು ಇಂದು ಇಲ್ಲಿ ಪ್ರಕಟಿಸಿದರು.</p>.<p>ಆದರೆ ಈ ಮುನ್ನ ಜಯಲಲಿತಾ ಮೈತ್ರಿಕೂಟದ ಜನತಾ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ ಅವರನ್ನು ಸರ್ಕಾರಕ್ಕೆ ಸೇರಿಸಿಕೊಳ್ಳಬೇಕೆಂಬ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈಗ ಸ್ವಾಮಿ ಅವರ ನಿಲುವು ಸದ್ಯಕ್ಕೆ ಗೊತ್ತಾಗಿಲ್ಲ. ಜಯಲಲಿತಾ ಅವರು ಸ್ವಾಮಿ ಅವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ.</p>.<p><strong>ಪ್ರಧಾನಮಂತ್ರಿಯಾಗಿ ವಾಜಪೇಯಿ ನೇಮಕ<br />ನವದೆಹಲಿ, ಮಾರ್ಚ್ 15–</strong> ಬಿಜೆಪಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೂತನ ಪ್ರಧಾನಮಂತ್ರಿಯನ್ನಾಗಿ ರಾಷ್ಟ್ರಪತಿ ಕೆ.ಆರ್.ನಾರಾಯಣನ್ ಇಂದು ರಾತ್ರಿ ನೇಮಕ ಮಾಡಿದರು.</p>.<p>ವಾಜಪೇಯಿ ಅವರು 19ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ಸ್ವೀಕಾರ ಮಾಡಿದ ಹತ್ತು ದಿನಗಳಲ್ಲಿ ಲೋಕಸಭೆಯ ವಿಶ್ವಾಸಮತವನ್ನು ಕೋರುವಂತೆ ರಾಷ್ಟ್ರಪತಿ ಅವರು ವಾಜಪೇಯಿ ಅವರಿಗೆ ಆದೇಶ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>