ರಾಷ್ಟ್ರಪತಿ ಅವರ ಭಾಷಣದ ಮೇಲಿನ ಎರಡು ದಿನಗಳ ಚರ್ಚೆಗೆ ಉತ್ತಿರಿಸಿದ ಅವರು, ತಮಗೆ ಈಗ ಹೊರಿಸಿರುವ ಜವಾಬ್ದಾರಿಯನ್ನು ನಿರ್ವಹಿಸಿದ ಬಳಿಕೆ ಮುಂದಿನ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದರು. ಆಗ ಬಿಜೆಪಿಯ ಸದಸ್ಯರು ‘ಈ ನಿರ್ಧಾರ ಬೇಡ’ ಎಂದು ಕೈ ಎತ್ತಿ ಮನವಿ ಮಾಡಿದರು. ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯವನ್ನು ಲೋಕಸಭೆ ಧ್ವನಿಮತದಿಂದ ಅಂಗೀಕರಿಸಿತು.