<p><strong>ಅಡ್ವಾಣಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಗೆ ಆದೇಶ</strong></p>.<p><strong>ನವದೆಹಲಿ, ಸೆ. 6 (ಯುಎನ್ಐ, ಪಿಟಿಐ)– </strong>ಜೈನ್ ಹವಾಲ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಎಲ್.ಕೆ. ಅಡ್ವಾಣಿ ಅವರ ವಿರುದ್ಧ ‘ಭ್ರಷ್ಟಾಚಾರ ಹಾಗೂ ಅಪರಾಧೀಕರಣ ಪಿತೂರಿ’ ಆರೋಪಪಟ್ಟಿಯನ್ನು ಸಲ್ಲಿಸಲು ವಿಶೇಷ ನ್ಯಾಯಾಲಯ ಇಂದು ಆದೇಶಿಸಿದೆ.</p>.<p>ಸಿಬಿಐ ಸಲ್ಲಿಸಿರುವ ದೋಷಾರೋಪಪಟ್ಟಿ ಹಾಗೂ ಸಾಕ್ಷ್ಯಾಧಾರಗಳಿಂದ ಅಡ್ವಾಣಿ ಅವರ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ವಿಶೇಷ ನ್ಯಾಯಾಧೀಶ ವಿ.ಬಿ. ಗುಪ್ತಾ ಕಿಕ್ಕಿರಿದು ತುಂಬಿದ್ದ ನ್ಯಾಯಾಲಯದಲ್ಲಿ ಘೋಷಿಸಿದರು.</p>.<p><strong>ಆಡಳಿತದಲ್ಲಿ ಹಸ್ತಕ್ಷೇಪ ತಡೆಗೆ ಭರವಸೆ</strong></p>.<p><strong>ಬೆಂಗಳೂರು, ಸೆ. 6– </strong>ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿನ ವಿಳಂಬ ನೀತಿ, ಆಡಳಿತದಲ್ಲಿನ ಅಸಂಬದ್ಧತೆ ತೊಡೆದು ಹಾಕಿ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಇಲ್ಲಿ ಉನ್ನತ ಅಧಿಕಾರಿಗಳಿಗೆ ಕರೆ ನೀಡಿದರು.</p>.<p>ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾ ಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ವಿಭಾಗಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರ ಸಮಾವೇಶ ಉದ್ಘಾಟಿಸಿದ ಅವರು, ಸರ್ಕಾರ ಹಾಗೂ ಜನತೆಯ ನಡುವಿನ ಕೊಂಡಿಯಾಗಿರುವ ಅಧಿಕಾರಶಾಹಿಯ ಕಾರ್ಯಕ್ಷಮತೆಯೇ ಯಾವುದೇ ಸರ್ಕಾರದ ಕಾರ್ಯವೈಖರಿಗೆ ಅಳತೆಗೋಲಾಗುವುದು ಎಂದರು.</p>.<p>ಆಡಳಿತ ಯಂತ್ರವನ್ನು ಧೃತಿಗೆಡಿಸುವ ಕೆಲವು ರಾಜಕೀಯ ಶಕ್ತಿಗಳು ಸದಾ ಕಾಲದಲ್ಲಿಯೂ ಕೆಲಸ ಮಾಡುತ್ತಿರುತ್ತವೆ. ಇಂಥ ಶಕ್ತಿಗಳ ವಿಚ್ಛಿದ್ರಕಾರಕ ಯತ್ನಗಳಿಗೆ ಅಳುಕಬೇಕಾಗಿಲ್ಲ ಎಂದ ಅವರು, ಆಡಳಿತದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲದಂತೆ ನೋಡಿಕೊಳ್ಳುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಡ್ವಾಣಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಗೆ ಆದೇಶ</strong></p>.<p><strong>ನವದೆಹಲಿ, ಸೆ. 6 (ಯುಎನ್ಐ, ಪಿಟಿಐ)– </strong>ಜೈನ್ ಹವಾಲ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಎಲ್.ಕೆ. ಅಡ್ವಾಣಿ ಅವರ ವಿರುದ್ಧ ‘ಭ್ರಷ್ಟಾಚಾರ ಹಾಗೂ ಅಪರಾಧೀಕರಣ ಪಿತೂರಿ’ ಆರೋಪಪಟ್ಟಿಯನ್ನು ಸಲ್ಲಿಸಲು ವಿಶೇಷ ನ್ಯಾಯಾಲಯ ಇಂದು ಆದೇಶಿಸಿದೆ.</p>.<p>ಸಿಬಿಐ ಸಲ್ಲಿಸಿರುವ ದೋಷಾರೋಪಪಟ್ಟಿ ಹಾಗೂ ಸಾಕ್ಷ್ಯಾಧಾರಗಳಿಂದ ಅಡ್ವಾಣಿ ಅವರ ವಿರುದ್ಧದ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ವಿಶೇಷ ನ್ಯಾಯಾಧೀಶ ವಿ.ಬಿ. ಗುಪ್ತಾ ಕಿಕ್ಕಿರಿದು ತುಂಬಿದ್ದ ನ್ಯಾಯಾಲಯದಲ್ಲಿ ಘೋಷಿಸಿದರು.</p>.<p><strong>ಆಡಳಿತದಲ್ಲಿ ಹಸ್ತಕ್ಷೇಪ ತಡೆಗೆ ಭರವಸೆ</strong></p>.<p><strong>ಬೆಂಗಳೂರು, ಸೆ. 6– </strong>ಅಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿನ ವಿಳಂಬ ನೀತಿ, ಆಡಳಿತದಲ್ಲಿನ ಅಸಂಬದ್ಧತೆ ತೊಡೆದು ಹಾಕಿ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ಇಲ್ಲಿ ಉನ್ನತ ಅಧಿಕಾರಿಗಳಿಗೆ ಕರೆ ನೀಡಿದರು.</p>.<p>ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾ ಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ವಿಭಾಗಾಧಿಕಾರಿ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರ ಸಮಾವೇಶ ಉದ್ಘಾಟಿಸಿದ ಅವರು, ಸರ್ಕಾರ ಹಾಗೂ ಜನತೆಯ ನಡುವಿನ ಕೊಂಡಿಯಾಗಿರುವ ಅಧಿಕಾರಶಾಹಿಯ ಕಾರ್ಯಕ್ಷಮತೆಯೇ ಯಾವುದೇ ಸರ್ಕಾರದ ಕಾರ್ಯವೈಖರಿಗೆ ಅಳತೆಗೋಲಾಗುವುದು ಎಂದರು.</p>.<p>ಆಡಳಿತ ಯಂತ್ರವನ್ನು ಧೃತಿಗೆಡಿಸುವ ಕೆಲವು ರಾಜಕೀಯ ಶಕ್ತಿಗಳು ಸದಾ ಕಾಲದಲ್ಲಿಯೂ ಕೆಲಸ ಮಾಡುತ್ತಿರುತ್ತವೆ. ಇಂಥ ಶಕ್ತಿಗಳ ವಿಚ್ಛಿದ್ರಕಾರಕ ಯತ್ನಗಳಿಗೆ ಅಳುಕಬೇಕಾಗಿಲ್ಲ ಎಂದ ಅವರು, ಆಡಳಿತದಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲದಂತೆ ನೋಡಿಕೊಳ್ಳುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>