ಪಟ್ನಾ, ಮೇ 3 (ಪಿಟಿಐ, ಯುಎನ್ಐ)– ಮೇವು ಹಗರಣದಲ್ಲಿ ಬಿಹಾರದ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಗುರಿಪಡಿಸುವ ಸಿಬಿಐ ನಿರ್ಧಾರದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ– ಸಮತಾ ಪಕ್ಷ ಕರೆ ನೀಡಿದ್ದ ಬಂದ್ ದಿನವಾದ ಇಂದು ಕೆಲವೆಡೆ ಹಿಂಸಾಚಾರ, ಗುಂಪು ಘರ್ಷಣೆ, ಲಾಠಿ ಪ್ರಹಾರ ನಡೆದಿದೆ.