<p><strong>ಕೆಪಿಎಸ್ಸಿ ಪರೀಕ್ಷೆ: ಯದ್ವಾತದ್ವ ಅಂಕ</strong></p>.<p><strong>ಬೆಂಗಳೂರು, ಏ. 7– </strong>ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಕೆಲವು ಉತ್ತರ ಪತ್ರಿಕೆಗಳಲ್ಲಿ ‘ಯದ್ವಾತದ್ವ’ ಅಂಕ ನೀಡಿರುವುದು ಬೆಳಕಿಗೆ ಬಂದಿದೆ.</p>.<p>1993ರ ಜುಲೈ– ಆಗಸ್ಟ್ನಲ್ಲಿ ನಡೆದ ಈ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸರಿಯಾಗಿ ನಡೆದಿಲ್ಲ ಎಂಬುದು ಪೂರ್ವಭಾವಿ ಪರಿಶೀಲನೆಯಿಂದ ವ್ಯಕ್ತವಾಗಿರುವ ಕಾರಣ ಫಲಿತಾಂಶ ತಡೆಹಿಡಿದು ಎಲ್ಲ ಉತ್ತರ ಪತ್ರಿಕೆಗಳ ಪುನರ್ ಮೌಲ್ಯಮಾಪನ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧಾರ ಕೈಗೊಂಡಿರುವುದು ಸಮರ್ಥನೀಯ ಎಂದುಕರ್ನಾಟಕ ಆಡಳಿತ ನ್ಯಾಯಮಂಡಲಿ ತೀರ್ಪು ನೀಡಿದೆ.</p>.<p>ಆಯೋಗದ ನಿರ್ಧಾರದ ಕ್ರಮಬದ್ಧತೆಯನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಆಡಳಿತ ನ್ಯಾಯಮಂಡಳಿಗೆ ಮನವಿ ಸಲ್ಲಿಸಿದ್ದರು.</p>.<p><strong>ಪರಿಶಿಷ್ಟರಿಗೆ ದೌರ್ಜನ್ಯದ ವಿರುದ್ಧ ಸಂವಿಧಾನ ರಕ್ಷಣೆ</strong></p>.<p><strong>ಬೆಂಗಳೂರು, ಏ. 7– </strong>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ವಿಧಿಯಲ್ಲಿ ಸೇರಿಸುವ ವಿಷಯವನ್ನು ಪರಿಶೀಲಿಸ<br />ಲಾಗುತ್ತಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಸಚಿವ ಸೀತಾರಾಂ ಕೇಸರಿ ಇಂದು ಇಲ್ಲಿ ಪ್ರಕಟಿಸಿದರು.</p>.<p>ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಮಾಜ ಕಲ್ಯಾಣ ಸಚಿವರ ಸಮ್ಮೇಳನವನ್ನು ಉದ್ಘಾಟಿಸಿದ ಸಚಿವರು, ಪರಿಶಿಷ್ಟ ಜಾತಿ ಮತ್ತು ಬುಡಕಟ್ಟಿನ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಅನಗತ್ಯ ವ್ಯಾಜ್ಯಗಳಿಂದ ಸಂರಕ್ಷಿಸಲು ಸಂವಿಧಾನದ ವಿಧಿಯಲ್ಲಿ ಸೇರಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಪಿಎಸ್ಸಿ ಪರೀಕ್ಷೆ: ಯದ್ವಾತದ್ವ ಅಂಕ</strong></p>.<p><strong>ಬೆಂಗಳೂರು, ಏ. 7– </strong>ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಕೆಲವು ಉತ್ತರ ಪತ್ರಿಕೆಗಳಲ್ಲಿ ‘ಯದ್ವಾತದ್ವ’ ಅಂಕ ನೀಡಿರುವುದು ಬೆಳಕಿಗೆ ಬಂದಿದೆ.</p>.<p>1993ರ ಜುಲೈ– ಆಗಸ್ಟ್ನಲ್ಲಿ ನಡೆದ ಈ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸರಿಯಾಗಿ ನಡೆದಿಲ್ಲ ಎಂಬುದು ಪೂರ್ವಭಾವಿ ಪರಿಶೀಲನೆಯಿಂದ ವ್ಯಕ್ತವಾಗಿರುವ ಕಾರಣ ಫಲಿತಾಂಶ ತಡೆಹಿಡಿದು ಎಲ್ಲ ಉತ್ತರ ಪತ್ರಿಕೆಗಳ ಪುನರ್ ಮೌಲ್ಯಮಾಪನ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧಾರ ಕೈಗೊಂಡಿರುವುದು ಸಮರ್ಥನೀಯ ಎಂದುಕರ್ನಾಟಕ ಆಡಳಿತ ನ್ಯಾಯಮಂಡಲಿ ತೀರ್ಪು ನೀಡಿದೆ.</p>.<p>ಆಯೋಗದ ನಿರ್ಧಾರದ ಕ್ರಮಬದ್ಧತೆಯನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಆಡಳಿತ ನ್ಯಾಯಮಂಡಳಿಗೆ ಮನವಿ ಸಲ್ಲಿಸಿದ್ದರು.</p>.<p><strong>ಪರಿಶಿಷ್ಟರಿಗೆ ದೌರ್ಜನ್ಯದ ವಿರುದ್ಧ ಸಂವಿಧಾನ ರಕ್ಷಣೆ</strong></p>.<p><strong>ಬೆಂಗಳೂರು, ಏ. 7– </strong>ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ವಿಧಿಯಲ್ಲಿ ಸೇರಿಸುವ ವಿಷಯವನ್ನು ಪರಿಶೀಲಿಸ<br />ಲಾಗುತ್ತಿದೆ ಎಂದು ಕೇಂದ್ರ ಸಮಾಜ ಕಲ್ಯಾಣ ಸಚಿವ ಸೀತಾರಾಂ ಕೇಸರಿ ಇಂದು ಇಲ್ಲಿ ಪ್ರಕಟಿಸಿದರು.</p>.<p>ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಮಾಜ ಕಲ್ಯಾಣ ಸಚಿವರ ಸಮ್ಮೇಳನವನ್ನು ಉದ್ಘಾಟಿಸಿದ ಸಚಿವರು, ಪರಿಶಿಷ್ಟ ಜಾತಿ ಮತ್ತು ಬುಡಕಟ್ಟಿನ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಅನಗತ್ಯ ವ್ಯಾಜ್ಯಗಳಿಂದ ಸಂರಕ್ಷಿಸಲು ಸಂವಿಧಾನದ ವಿಧಿಯಲ್ಲಿ ಸೇರಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>