<p><strong>ಭಿನ್ನಮತೀಯರ ಸವಾಲು ಎದುರಿಸಲು ರಾವ್ ಕ್ರಮ</strong><br /><br />ನವದೆಹಲಿ, ಏ. 13 (ಯುಎನ್ಐ)– ಕಾಂಗೈ ಅಧ್ಯಕ್ಷ ಹಾಗೂ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ಏಪ್ರಿಲ್ 24ರಂದು ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾಗುವ ಮೊದಲು, ತಮ್ಮ ನಾಯಕತ್ವಕ್ಕೆ ಸವಾಲು ಹಾಕುತ್ತಿರುವ ಭಿನ್ನಮತೀಯರ ಯತ್ನಗಳನ್ನು ವಿಫಲಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.</p>.<p><strong>ಹೆಚ್ಚು ರಜೆ– ‘ಮರುಚಿಂತನೆ ಅಗತ್ಯ’</strong></p>.<p>ಬೆಂಗಳೂರು, ಏ. 13– ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ನಿಧನರಾದಾಗ ಎರಡು ಅಥವಾ ಅದಕ್ಕಿಂತ ಹೆಚ್ಚು ದಿನ ರಜೆ ಘೋಷಿಸುವ ಬಗ್ಗೆ ಸರ್ಕಾರ ಮರುಚಿಂತನೆ ಮಾಡಬೇಕಾದ ಅಗತ್ಯವಿದೆ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿ ಕಂಡುಬಂದಿದೆ.</p>.<p>ಸೋಮವಾರ ನಿಧನರಾದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಗೌರವಾರ್ಥ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಂಗಳವಾರ, ಬುಧವಾರ ರಜೆ ಪ್ರಕಟಿಸಿದವು. ಗುರುವಾರ ಮಹಾವೀರ ಜಯಂತಿ, ಶುಕ್ರವಾರ ಡಾ. ಅಂಬೇಡ್ಕರ್ ಜಯಂತಿಗೆ ಮೊದಲೇ ರಜೆ ನಿಗದಿಯಾಗಿತ್ತು.</p>.<p>ನಾಲ್ಕು ದಿನ ಸತತವಾಗಿ ರಜೆ ಬಂದಿದ್ದರಿಂದ ದೇಶದ ಅಭಿವೃದ್ಧಿ ಕುಂಠಿತವಾಗಿದೆ. ಅರ್ಥ ವ್ಯವಸ್ಥೆಗೆ ದೊಡ್ಡ ಪೆಟ್ಟು ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಿನ್ನಮತೀಯರ ಸವಾಲು ಎದುರಿಸಲು ರಾವ್ ಕ್ರಮ</strong><br /><br />ನವದೆಹಲಿ, ಏ. 13 (ಯುಎನ್ಐ)– ಕಾಂಗೈ ಅಧ್ಯಕ್ಷ ಹಾಗೂ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ಏಪ್ರಿಲ್ 24ರಂದು ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾಗುವ ಮೊದಲು, ತಮ್ಮ ನಾಯಕತ್ವಕ್ಕೆ ಸವಾಲು ಹಾಕುತ್ತಿರುವ ಭಿನ್ನಮತೀಯರ ಯತ್ನಗಳನ್ನು ವಿಫಲಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.</p>.<p><strong>ಹೆಚ್ಚು ರಜೆ– ‘ಮರುಚಿಂತನೆ ಅಗತ್ಯ’</strong></p>.<p>ಬೆಂಗಳೂರು, ಏ. 13– ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ನಿಧನರಾದಾಗ ಎರಡು ಅಥವಾ ಅದಕ್ಕಿಂತ ಹೆಚ್ಚು ದಿನ ರಜೆ ಘೋಷಿಸುವ ಬಗ್ಗೆ ಸರ್ಕಾರ ಮರುಚಿಂತನೆ ಮಾಡಬೇಕಾದ ಅಗತ್ಯವಿದೆ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿ ಕಂಡುಬಂದಿದೆ.</p>.<p>ಸೋಮವಾರ ನಿಧನರಾದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಗೌರವಾರ್ಥ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಂಗಳವಾರ, ಬುಧವಾರ ರಜೆ ಪ್ರಕಟಿಸಿದವು. ಗುರುವಾರ ಮಹಾವೀರ ಜಯಂತಿ, ಶುಕ್ರವಾರ ಡಾ. ಅಂಬೇಡ್ಕರ್ ಜಯಂತಿಗೆ ಮೊದಲೇ ರಜೆ ನಿಗದಿಯಾಗಿತ್ತು.</p>.<p>ನಾಲ್ಕು ದಿನ ಸತತವಾಗಿ ರಜೆ ಬಂದಿದ್ದರಿಂದ ದೇಶದ ಅಭಿವೃದ್ಧಿ ಕುಂಠಿತವಾಗಿದೆ. ಅರ್ಥ ವ್ಯವಸ್ಥೆಗೆ ದೊಡ್ಡ ಪೆಟ್ಟು ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>