<p><strong>ಇನ್ನಷ್ಟು ತೆರಿಗೆ ರಿಯಾಯಿತಿ</strong><strong>ಕಾಗದ, ಟಿ.ವಿ., ಔಷಧ ಅಗ್ಗ</strong></p>.<p>ನವದೆಹಲಿ, ಮೇ 18 (ಪಿಟಿಐ, ಯುಎನ್ಐ)– ಮೂಲದಲ್ಲೇ ಮುರಿದುಕೊಳ್ಳುವ ತೆರಿಗೆಯ ಪ್ರಮಾಣದಲ್ಲಿ ಅರ್ಧದಷ್ಟು ಇಳಿತ, ಮೂಲಸೌಲಭ್ಯ ಉದ್ದಿಮೆಗಳಿಗೆ ನೀಡಲಾದ 5 ವರ್ಷಗಳ ತೆರಿಗೆ ವಿನಾಯಿತಿ ಯೋಜನೆಯಲ್ಲಿ ಬದಲಾವಣೆ ಹಾಗೂ ಇನ್ನೂ 31 ಜೀವರಕ್ಷಕ ಔಷಧಗಳಿಗೆ ಆಮದು ತೆರಿಗೆ ವಿನಾಯಿತಿ ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷ ತೆರಿಗೆಗಳಲ್ಲಿ ಹಲವಾರು<br />ರಿಯಾಯಿತಿಗಳನ್ನು ಸರ್ಕಾರ ಇಂದು ಪ್ರಕಟಿಸಿದೆ.</p>.<p>ಹಣಕಾಸು ಸಚಿವ ಮನಮೋಹನ ಸಿಂಗ್ ಅವರು ಇಂದು ಹಣಕಾಸು ಮಸೂದೆಯನ್ನು ಚರ್ಚೆಗೆ ಮಂಡಿಸುತ್ತಾ ಇದನ್ನು ಪ್ರಕಟಿಸಿ, ಈ ರಿಯಾಯಿತಿಗಳು ಆರ್ಥಿಕರಂಗಕ್ಕೆ ಉತ್ತೇಜನ ನೀಡುವುದಲ್ಲದೆ ಕೆಲವು ನಿರ್ಣಾಯಕ ಕ್ಷೇತ್ರಗಳಿಗೆ ಪರಿಹಾರ ಒದಗಿಸುತ್ತವೆ<br />ಎಂದು ಹೇಳಿದರು.</p>.<p><strong>ಪಂಚಾಯಿತಿ ಸದಸ್ಯರ ಪಕ್ಷಾಂತರ ನಿಷೇಧ ಸುಗ್ರೀವಾಜ್ಞೆ ಕರಡು ಸಿದ್ಧ</strong></p>.<p>ಬೆಂಗಳೂರು, ಮೇ 18– ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರ ಪಕ್ಷಾಂತರ ನಿಷೇಧದ ಸುಗ್ರೀವಾಜ್ಞೆಯ ಕರಡು ಅಂತಿಮಗೊಂಡಿದ್ದು ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಅದನ್ನು ಚರ್ಚಿಸಿ ರಾಜ್ಯಪಾಲರ ಸಹಿಗೆ ಕಳುಹಿಸಲಾಗು<br />ವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಎಂ.ಪಿ.ಪ್ರಕಾಶ್ ಇಂದು ಇಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇನ್ನಷ್ಟು ತೆರಿಗೆ ರಿಯಾಯಿತಿ</strong><strong>ಕಾಗದ, ಟಿ.ವಿ., ಔಷಧ ಅಗ್ಗ</strong></p>.<p>ನವದೆಹಲಿ, ಮೇ 18 (ಪಿಟಿಐ, ಯುಎನ್ಐ)– ಮೂಲದಲ್ಲೇ ಮುರಿದುಕೊಳ್ಳುವ ತೆರಿಗೆಯ ಪ್ರಮಾಣದಲ್ಲಿ ಅರ್ಧದಷ್ಟು ಇಳಿತ, ಮೂಲಸೌಲಭ್ಯ ಉದ್ದಿಮೆಗಳಿಗೆ ನೀಡಲಾದ 5 ವರ್ಷಗಳ ತೆರಿಗೆ ವಿನಾಯಿತಿ ಯೋಜನೆಯಲ್ಲಿ ಬದಲಾವಣೆ ಹಾಗೂ ಇನ್ನೂ 31 ಜೀವರಕ್ಷಕ ಔಷಧಗಳಿಗೆ ಆಮದು ತೆರಿಗೆ ವಿನಾಯಿತಿ ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷ ತೆರಿಗೆಗಳಲ್ಲಿ ಹಲವಾರು<br />ರಿಯಾಯಿತಿಗಳನ್ನು ಸರ್ಕಾರ ಇಂದು ಪ್ರಕಟಿಸಿದೆ.</p>.<p>ಹಣಕಾಸು ಸಚಿವ ಮನಮೋಹನ ಸಿಂಗ್ ಅವರು ಇಂದು ಹಣಕಾಸು ಮಸೂದೆಯನ್ನು ಚರ್ಚೆಗೆ ಮಂಡಿಸುತ್ತಾ ಇದನ್ನು ಪ್ರಕಟಿಸಿ, ಈ ರಿಯಾಯಿತಿಗಳು ಆರ್ಥಿಕರಂಗಕ್ಕೆ ಉತ್ತೇಜನ ನೀಡುವುದಲ್ಲದೆ ಕೆಲವು ನಿರ್ಣಾಯಕ ಕ್ಷೇತ್ರಗಳಿಗೆ ಪರಿಹಾರ ಒದಗಿಸುತ್ತವೆ<br />ಎಂದು ಹೇಳಿದರು.</p>.<p><strong>ಪಂಚಾಯಿತಿ ಸದಸ್ಯರ ಪಕ್ಷಾಂತರ ನಿಷೇಧ ಸುಗ್ರೀವಾಜ್ಞೆ ಕರಡು ಸಿದ್ಧ</strong></p>.<p>ಬೆಂಗಳೂರು, ಮೇ 18– ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರ ಪಕ್ಷಾಂತರ ನಿಷೇಧದ ಸುಗ್ರೀವಾಜ್ಞೆಯ ಕರಡು ಅಂತಿಮಗೊಂಡಿದ್ದು ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಅದನ್ನು ಚರ್ಚಿಸಿ ರಾಜ್ಯಪಾಲರ ಸಹಿಗೆ ಕಳುಹಿಸಲಾಗು<br />ವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವ ಎಂ.ಪಿ.ಪ್ರಕಾಶ್ ಇಂದು ಇಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>